Saturday, August 20, 2011

ಪತ್ರಕರ್ತರಿಗೆ ಗಣಿ ಕಪ್ಪ: thatskannada.comನಲ್ಲಿ ಕೆಲವೇ ಘಂಟೆಗಳಲ್ಲಿ ಮಾಯವಾಯಿತೇಕೆ?

ಪತ್ರಕರ್ತರಿಗೆ ಗಣಿ ಕಪ್ಪ: thatskannada.comನಲ್ಲಿ ಕೆಲವೇ ಘಂಟೆಗಳಲ್ಲಿ ಮಾಯವಾಯಿತೇಕೆ?

ಪತ್ರಕರ್ತರಿಗೆ ಗಣಿ ಕಪ್ಪದ ಸುದ್ದಿ ನಿನ್ನೆ ಅಂತರ್ಜಾಲದಲ್ಲಿ ಚೆನ್ನಾಗಿಯೇ ಹರಿದಾಡಿತು.

thatskannada.com ಪೋರ‍್ಟಲಿನಲ್ಲೂ ಈ ಸುದ್ದಿ publish ಆಗಿತ್ತು.

ಆದರೆ ಪ್ರಾಯಷ: ಎರಡೇ ಘಂಟೆ ಅವಧಿಯಲ್ಲಿ ಆ ಲಿಂಕ್ ಕ್ಲಿಕ್ ಮಾಡಿದಾಗ ಓದುಗರಿಗೆ ಸಿಕ್ಕಿದ್ದು "ಪುಟ ಸಿಗುತ್ತಿಲ್ಲ"ವೆಂಬ ಮೆಸೇಜ್. ಮತ್ತೊಂದು ಘಂಟೆಯಲ್ಲಿ ಆ ಲಿಂಕೇ ಪೂರ್ತಿ ಮಾಯವಾಗಿ ಬಿಟ್ಟಿತು.

thatskannadaದ ಶಾಮಿಯೂ ಲೋಕಾಯುಕ್ತ ವರದಿಯಲ್ಲಿ ಹೆಸರಿರುವ ಸಂಪಾದಕರೂ ಕ್ಲೋಸ್ ಫ್ರೆಂಡುಗಳಿರಬಹುದು. ಆದರೆ ಪತ್ರಿಕಾ ಧರ್ಮವನ್ನು ಮರೆತು ಮಿತ್ರರಿಗಾಗಿ ಅಥವಾ ಯಾವುದೋ ಒತ್ತಡಗೊಳಕ್ಕಾಗಿ ಶಾಮಿ ಹೀಗೆ ತನ್ನ ಎಡಿಟೋರಿಯಲ್ ಕತ್ತರಿ ಪ್ರಯೋಗ ಮಾಡಬಾರದಿತ್ತು.

ಏನಂತೀರಿ?

Friday, August 19, 2011

ಲೋಕಾಯುಕ್ತ ವರದಿ ಬಯಲು ಮಾಡಿದ ಗಣಿ ರಹಸ್ಯ: ಆರ್.ಬಿ:೧೦ ಲಕ್ಷ, ವಿ.ಭಟ್: ೨೫ ಲಕ್ಷ, ಬೆಂಗಳೂರು ಮಿರರ್, Deccan Chronicle, Press Club: 5 ಲಕ್ಷ

ಲೋಕಾಯುಕ್ತ ವರದಿ ಬಯಲು ಮಾಡಿದ ಗಣಿ ರಹಸ್ಯ: ಆರ್.ಬಿ:೧೦ ಲಕ್ಷ, ವಿ.ಭಟ್: ೨೫ ಲಕ್ಷ, ಬೆಂಗಳೂರು ಮಿರರ್, Deccan Chronicle, Press Club: 5 ಲಕ್ಷ


First of all "ಪ್ರಜಾವಾಣಿ"ಗೆ ಭೇಷ್ ಅನ್ನಬೇಕಾಗಿದೆ. ಲೋಕಾಯುಕ್ತ ವರದಿ ಎಲ್ಲಾ ಮಾಧ್ಯಮಗಳಿಗೂ ಲಭ್ಯವಾಗಿದ್ದರೂ, "ಪ್ರಜಾವಾಣಿ’ಯೊಂದೇ systematic ಆಗಿ ವರದಿಯನ್ನು ಅವಲೋಕಿಸಿ ಎಳೆ ಎಳೆಯಾಗಿ ಅನಾವರಣ ಮಾಡುತ್ತಿದೆ.

ಹಿಂದೊಮ್ಮೆ ಈ ಬ್ಲಾಗಲ್ಲಿ ಗಣಿ ರೆಡ್ಡಿಗಳ ಎಂಜಲುಂಡಿರುವ ಪತ್ರಕರ್ತರ ಬಗ್ಗೆ ಬರೆದಿದ್ದೆ. ನೋಡಿ "ರೆಡ್ಡಿಗಳ ಕಪಿ ಮುಷ್ಠಿಯಿಂದ ಕರ್ನಾಟಕಕ್ಕೆ ಮುಕ್ತಿಯೆಂದು?ಮಾಧ್ಯಮಗಳಲ್ಲಿ ನಡೆಯುತ್ತಿರುವ ಭಿನ್ನಮತ - ರೆಡ್ಡಿಗಳ ಮುಷ್ಠಿಯಲ್ಲಿ ಕರ್ನಾಟಕದ ಮಾಧ್ಯಮ ಮಿತ್ರರು". ಅದೆಲ್ಲಾ ಇಂದು ನಿಜವಾಗಿದೆ.

ಇಂದಿನ "ಪ್ರಜಾವಾಣಿ" ನೋಡಿ:

  • ಆರ್.ಬಿ. (ರವಿ?) - ರೂ ೧೦ ಲಕ್ಷ
  • ವಿ.ಭಟ್ (ವಿಶ್ವೇಶ್ವರ?) - ರೂ ೨೫ ಲಕ್ಷ ಮತ್ತು 50 ಲಕ್ಷ (ಪ್ರಾಯಶ: ಇದರಲ್ಲೇ ಹೊಸ ಮನೆ ಕಟ್ಟಿದರೇನೋ?)
  • ಬೆಂಗಳೂರು ಮಿರರ್ - ರೂ ೫ ಲಕ್ಷ
  • ಡೆಕ್ಕನ್ ಕ್ರೋನಿಕಲ್ - ರೂ ೨೫ ಲಕ್ಷ
  • ಪ್ರೆಸ್ ಕ್ಲಬ್ - ೫ ಲಕ್ಷ
ಹೀಗೆ ಕಳ್ಳೇಪುರಿ ಹಂಚಿದಂತೆ ಪತ್ರಕರ್ತರಿಗೆ ಗಣಿ ರೆಡ್ಡಿಗಳು ಹಣ ಹಂಚಿದ್ದಾರೆ. ಇನ್ನು ಪ್ರೆಸ್ ಕ್ಲಬ್ ಗಳಿಗೂ ಲಕ್ಷಗಟ್ಟಳೆ ಹಂಚಿದ್ದಾರೆ. ಇದನ್ನೆಲ್ಲಾ ನೋಡಿದಾಗ ಗಣಿ ದೊರೆಗಳ ಪರವಾಗಿ direct ಅಥವಾ indirect ಆಗಿ ಬೆಂಬಲಿಸುವ ಪತ್ರಕರ್ತರಿರುವುದು ಆಶ್ಚರ್ಯದ ಸಂಗತಿಯೇ ಅಲ್ಲ.

ಭಾರೀ ಸಜ್ಜನರಂತೆ ಅಣ್ಣಾ ಹಜಾರೆ ಹೋರಾಟಕ್ಕೆ ಏಕ್ ದಂ ಪ್ರಚಾರ ಕೊಡುವ ಇದೇ ಪತ್ರಕರ್ತರು ಅತ್ತ ಗಣಿ ದೊರೆಗಳ ಎಂಜಲನ್ನೂ ಯಾವುದೇ ನಾಚಿಕೆಯಿಲ್ಲದೆ ಬಾಚಿಕೊಂಡದನ್ನು ನೋಡುವಾಗ ಅಸಹ್ಯವಾಗುತ್ತದೆ.

ಈ ದರಿದ್ರ side business ಪತ್ರಕರ್ತರಿಗೂ ಯಡ್ಯೂರಪ್ಪನವರಿಗೂ difference ಏನು?

Friday, August 5, 2011

ಎಸ್.ಎಂ.ಕೃಷ್ಣರ ಅಚಾತುರ್ಯಗಳ ಸುದ್ದಿ ಕನ್ನಡ ಮಾಧ್ಯಮದಲ್ಲೇಕಿಲ್ಲ?


ವಿಶ್ವಸಂಸ್ಥೆಯಲ್ಲಿ ಪೋರ್ಚುಗಲ್ಲಿನ ಸಚಿವರ ಭಾಷಣವನ್ನು ಹಲವು ನಿಮಿಷಗಳ ಕಾಲ ಶಾಲಾ ಬಾಲಕನಂತೆ ಎಸ್.ಎಂ.ಕೃಷ್ಣರವರು ಓದಿ ಪೇಚಿಗೀಡಾಗಿದ್ದು ಹಳೆ ಸುದ್ದಿ.

ನಿನ್ನೆ ಲೋಕಸಭೆಯಲ್ಲೂ ಹೀಗೇ ಆಯಿತು. ಲೋಕಸಭಾ ಸದಸ್ಯರು ಕೇಳಿದ ಪ್ರಶ್ನೆಗೆ ಎಸ್.ಎಂ.ಕೃಷ್ಣ ತಡಕಾಡಿ ಉತ್ತರ ಹುಡುಕಲು ಒದ್ದಾಡಿದ್ದು ಬರೋಬ್ಬರಿ ಕೆಲ ನಿಮಿಷಗಳು. [Read: "S.M.Krishna caught in sticky situation in Lok Sabha"]

ಲೋಕಸಭಾ ಅಧ್ಯಕ್ಷರೇ ಕಡೆಗೆ ’ಬಿಟ್ಬುಡಿ ಸ್ವಾಮೀ. Answer has been tabled ಅಂಥ ಹೇಳ್ಬುಡಿ" ಎಂದು ಹೇಳಬೇಕಾಯಿತು. ಈ ಘಟನೆಯನ್ನು PTI "Foreign minister appeared absent minded" ಎಂದು ವರದಿ ಮಾಡಿತು.

ಈಗ ಬಂದಿರುವ ಸುದ್ದಿ ಪ್ರಕಾರ ಕೃಷ್ಣ ಅವರು PTIಗೆ ತನ್ನನ್ನು Absent minded ಎಂದು ಕರೆದಿದ್ದಕ್ಕೆ ಲಾಯರ್ ನೋಟಿಸ್ ಕಳಿಸಿದ್ದಾರೆ. [Read: "S.M.Krishna serves legal notice to PTI for calling him absent minded"]

ಇನ್ನು ರಾಜ್ಯಸಭೆಯಲ್ಲೂ ಕೃಷ್ಣರ ದಿನ ಸರಿಯಾಗಿದ್ದಂತಿಲ್ಲ. The Telegraph ವರದಿ ಪ್ರಕಾರ ಕೃಷ್ಣರವರು ಪದೇ ಪದೇ lost ಆದಾಗ ಮುಜುಗರ ತಪ್ಪಿಸಿದ್ಧು ಸ್ವತ: ಮನಮೋಹನ ಸಿಂಗ್ ಮತ್ತು ಚಿದಂಬರಂ. [Read: Manmohan and Team bails Krishna]

ಕೃಷ್ಣರವರಿಗೀಗ ೮೦ ವರ್ಷ. ಲೋಕಸಭೆ, ರಾಜ್ಯಸಭೆಯಲ್ಲಿ ಗುಮಾಸ್ತರು ಬರೆದು ಕೊಟ್ಟದ್ದನ್ನೇ ಓದಲು ಸಾಧ್ಯವಾಗದ ಕೃಷ್ಣರು ವಿದೇಶೀ ನಾಯಕರೊಂದಿಗೆ ಅಣು ಒಪ್ಪಂದ ಮತ್ತಿತರ ಮಹತ್ವಪೂರ್ಣ ವಿಷಯಗಳಲ್ಲಿ ಹೇಗೆ ಮತ್ತು ಯಾವ ರೀತಿ ವ್ಯವರಿಸುತ್ತಾರೆಂದು ಎಣಿಸಿದರೇ ಭಯವಾಗುತ್ತದೆ. ಇನ್ನು ಕೃಷ್ಣರವರ ಸೆಕೆರೆಟರಿ ರಾಘವೇಂದ್ರ ಶಾಸ್ತ್ರಿ ಮಾಡುತ್ತಿರುವ ಗೋಲ್ ಮಾಲುಗಳನ್ನು ಈಗಾಗಲೇ english ಮಾಧ್ಯಮಗಳು ವರದಿ ಮಾಡಿವೆ.

ದೇಶದ ಎಲ್ಲಾ ಪತ್ರಿಕೆಗಳಲ್ಲಿ ಬಂದ ಈ ವರದಿಗಳನ್ನು ನೋಡಿದ ನನಗೆ ಆಶ್ಚರ್ಯವಾದದೆಂದರೆ ಕನ್ನಡ ಮಾಧ್ಯಮಗಳಲ್ಲಿ ಅಥವಾ ಬ್ಲಾಗುಗಳಲ್ಲಿ ಮೇಲಾವುದೇ ಸುದ್ದಿ ವರದಿಯಾಗಲೇ ಇಲ್ಲ. ಕನ್ನಡಿಗ ಸಚಿವ ಎಂಬ ಮಮತೆಯೇ? ಅಥವಾ ಅವರ ಕಾಲದಲ್ಲಿ BDA site gift ಪಡೆದುಕೊಂಡ ಬೆಂಗಳೂರಿನ ಪತ್ರಕರ್ತರು, ಸಂಪಾದಕರು ಇನ್ನೂ ಅದರ ಋಣ ತೀರಿಸುತ್ತಿದ್ದಾರೆಯೇ?

ಕನ್ನಡಿಗರ ಮಾನಮರ್ಯಾದೆಯನ್ನು ಅಂತರಾಷ್ಟ್ರ‍ೀಯ ಮಟ್ಟದಲ್ಲಿ ಕಳೆಯುತ್ತಿರುವ ಕೃಷ್ಣ "ರಾಜ್ಯ ರಾಜಕೀಯವನ್ನು ಬಚಾಚ್ ಮಾಡಲು ಕೃಷ್ಣರಿಂದ ಮಾತ್ರ ಸಾಧ್ಯ", "ರಾಜ್ಯ ರಾಜಕೀಯಕ್ಕೆ ವಾಪಾಸಾಗಬೇಕು", ’ಪ್ರದೇಶ ಕಾಂಗ್ರೆಸ್ ಅಧ್ಯಕ್ಷರಾಗಬೇಕು" ಎಂದು ಇನ್ನೂ ಬರೆಯುತ್ತಿರುವ ದೊಡ್ಡ ಪತ್ರಕರ್ತರ ಗುಂಪೇ ಇನ್ನೂ ಕನ್ನಡ ಮಾಧ್ಯಮ ಲೋಕದಲ್ಲಿರುವುದು ಕನ್ನಡ ಮಾಧ್ಯಮ ಲೋಕ ಎಷ್ಟು ದಿವಾಳಿಯೆದ್ದು ಹೋಗಿದೆಯೆಂಬುದರ ಸಂಕೇತವಲ್ಲದೆ ಮತ್ತೇನು?