Showing posts with label ವಿಶ್ವೇಶ್ವರ ಭಟ್. Show all posts
Showing posts with label ವಿಶ್ವೇಶ್ವರ ಭಟ್. Show all posts

Saturday, June 26, 2010

ವಿ.ಕ. ವರದಿಗೆ ಡಿ.ಜಿ.ಅಜಯ ಸಿಂಗ್ ಪ್ರತ್ಯುತ್ತರ ಪತ್ರದ ಪೂರ್ಣಪಾಠ ಪ್ರಕಟಿಸದ ವಿ.ಕ. ಸಂಪಾದಕೀಯ ಮಂಡಳಿಯ ಬೃಹಳ್ಳನೆಯರು! Irony - ವಿಕ ಬೆಂಬಲಕ್ಕೆ "ಅಂಡೆ ಪಿರ್ಕಿ" ಬಿವಿ ಸೀತಾರಾಮ

ವಿ.ಕ. ವರದಿಗೆ ಡಿ.ಜಿ.ಅಜಯ ಸಿಂಗ್ ಪ್ರತ್ಯುತ್ತರ-ಪತ್ರದ ಪೂರ್ಣಪಾಠ ಪ್ರಕಟಿಸದ ವಿ.ಕ. ಸಂಪಾದಕೀಯ ಮಂಡಳಿಯ ಬೃಹಳ್ಳನೆಯರು!

Irony - ವಿಕ ಬೆಂಬಲಕ್ಕೆ "ಅಂಡೆ ಪಿರ್ಕಿ" ಬಿವಿ ಸೀತಾರಾಮ ಮಾತ್ರ


ಕಳೆದ ಬ್ಲಾಗ್ ಪೋಸ್ಟಿನಲ್ಲಿ ವಿ.ಕ.ದ "ವರ್ಗಾವಣೆ ದಂಧೆ" fixer ಪತ್ರಕರ್ತರು ಖಡಕ್ ಅಧಿಕಾರಿ ಅಜಯ ಸಿಂಗರ ವಿರುದ್ಧ ಸಾರಿರುವ ಯುದ್ಧದ ಕುರಿತು ಬರೆದಿದ್ದೆ.

ಅನಾಮಧೇಯ ಪತ್ರದ ಹಿನ್ನೆಲೆಯಲ್ಲಿ ಯಾರೋ ಕಾರಖೂನ ಮಾಡಿದ ಪ್ರೊಸೀಜರಲ್ ತಪ್ಪಿಗಾಗಿ ಕರ್ನಾಟಕದ ಡಿ.ಜಿ./ಐಜಿಪಿಯ ವಿರುದ್ಧ ಯಕ:ಶ್ಚಿತ್ ಯುದ್ಧ ಸಾರಿ, "ಪತ್ರಿಕಾ ಸ್ವಾತಂತ್ರ್ಯ ಹರಣ" ಎಂದೆಲ್ಲಾ ಬಡಬಡಿಸಿದ ವಿ.ಕ.ದ ಸಂಪಾದಕೀಯ ಮಂಡಳಿಯ ಅಸಲೀತನವನ್ನು ಅಜಯ್ ಸಿಂಗರು ತಮ್ಮ ಪತ್ರದಲ್ಲಿ ಎಳೆ ಎಳೆಯಾಗಿ ಬಿಡಿಸಿಟ್ಟಿದ್ದಾರೆ.

ಆದರೆ ಮೊದಲ ಪುಟದಲ್ಲಿ ಐಜಿಯನ್ನು ಹಿಗ್ಗಾ ಮುಗ್ಗಾ ಅವಹೇಳನ ಮಾಡಿದ ವಿ.ಕ.ದ ವರ್ಗಾವಣೆ ಪತ್ರಕರ್ತ ಏಜೆಂಟರ ಪೌರುಷ, ಐಜಿ ಅಜಯ ಸಿಂಗರ ಪತ್ರ ಪ್ರಕಟಿಸುವಲ್ಲಿ ಕಂಡು ಬಂದಿಲ್ಲ - ಎಲ್ಲೋ "ಹೆಸರು ಗೊತ್ತಿಲ್ಲ ಊರು ಬೇಡ"ದಂತಹ ಪತ್ರಗಳನ್ನು ಪ್ರಕಟಿಸುವ "ಓದುಗರ ಓಲೆ" ವಿಭಾಗದಲ್ಲಿ ಅಜಯ ಸಿಂಗರ ಪತ್ರವನ್ನು - ಅದೂ ಅರ್ಧ ಕತ್ತರಿಸಿ ಪ್ರಕಟಿಸಿ - ತಾವೆಂತಹ ಹೇಡಿಗಳು ಎಂದು ಭಟ್-ತ್ಯಾಗರಾಜ್-ರಾಘವೇಂದ್ರ ಭಟ್-ವಗೈರೆಗಳು ತೋರಿಸಿವೆ.

ಆದರೆ ಪ್ರಪಂಚ ಬದಲಾಗಿದೆ ಎಂದು ಈ ಕೂಪ ಮಂಡೂಕಗಳು ಅರಿತಂತಿಲ್ಲ! ಇಂಟರನೆಟ್ ಎಂಬ ಮಾಧ್ಯಮ ಎಷ್ಟು ಪ್ರಭಾವಶಾಲಿ ಎಂದು ಪೊಲೀಸರ ವರ್ಗಾವಣೆ ದಂಧೆಯಲ್ಲಿ ಮುಳುಗಿರುತ್ತಿದ್ದ ಈ ಪತ್ರಕರ್ತ ಶಿಖಾಮಣಿಗಳು ಅರಿತಂತಿಲ್ಲ. ಇಲ್ಲದಿದ್ದರೆ ಅಜಯ ಸಿಂಗರಂತಹ tech savvy ಸಜ್ಜನ ಅಧಿಕಾರಿಯ ವಿರುದ್ಧ ಹಿಗ್ಗಾಮುಗ್ಗಾ ಬರೆಯುತ್ತಿದ್ದರೆ?

ವಿ.ಕ. ಸಂಪಾದಕರಿಗೆ ಕಳಿಸಿದ ಪತ್ರದ ಮೂಲ ಪ್ರತಿಯನ್ನು ಕರ್ನಾಟಕ ಪೋಲಿಸ್ ವೆಬ್ ಸೈಟಿನಲ್ಲಿ ಕಾಣ ಬಹುದು (ಇಲ್ಲಿ ನೋಡಿ - http://media.ksp.diqtech.com/files/DO_to_VK.pdf)

ತಮ್ಮ ಪತ್ರವನ್ನು ಕತ್ತರಿಸಿದಲ್ಲದೆ, ಹೇಡಿಗಳಂತೆ ಎಲ್ಲೋ ಒಳಪುಟದಲ್ಲಿ ಪ್ರಕಟಿಸಿರುವ ಬಗ್ಗೆಯೂ ಅಜಯ ಸಿಂಗರು ಆಕ್ರೋಶ ಪಟ್ಟು follow-up ಪತ್ರ ಕಳಿಸಿದ್ದಲ್ಲದೆ ಕಾನೂನು ಕ್ರಮ ಕೈಗೊಳ್ಳಬೇಕಾಗಬಹುದು ಎಂದೂ ಎಚ್ಚರಿಸಿದ್ದಾರೆ.

ಅಜಯ ಸಿಂಹರ ಮೂಲ ಪತ್ರದಲ್ಲಿದ್ದ ಆದರೆ ವಿಕದಲ್ಲಿ ಕತ್ತರಿ ಪ್ರಯೋಗಕ್ಕೊಳಗಾದ ಒಂದು ಪ್ಯಾರಾಗ್ರಾಫ್ ಉಲ್ಲೇಖನೀಯ: "ತಪ್ಪು ಮಾಹಿತಿಯ ಆಧಾರದ ಮೇಲೆ ಕೆಲವು ಮುಖ್ಯ ವ್ಯಕ್ತಿಗಳ ಅಭಿಪ್ರಾಯವನ್ನು ಪಡೆದುಕೊಂಡಿರುತ್ತೀರಿ ಎಂದು ಸ್ಪಷ್ಟವಾಗಿರುತ್ತದೆ. ಅದರಲ್ಲಿ ಕೆಲವರು ನನ್ನನ್ನು ನಿನ್ನೆಯಿಂದ ದೂರವಾಣಿ ಮೂಲಕ ಸಂಪರ್ಕಿಸಿ ಅವರು ಹೇಳಿದ್ದು ಒಂದಾದರೆ, ನಿಮ್ಮ ಪತ್ರಿಕೆಯಲ್ಲಿ ಪ್ರಕಟವಾಗಿರುವುದೇ ಬೇರೆ ಎಂದು ತಿಳಿಸಿದ್ದಾರೆ. ಇದು ಪತ್ರಿಕೆಯ ಸಂಪಾದಕರಾಗಿ ನಿಮ್ಮ ಸ್ವಾತಂತ್ರ್ಯ? ನೀವು ನ್ಯಾಯಯುತ, ಆತ್ಮಸಾಕ್ಷಿಯುಳ್ಳ ಸಜ್ಜನ ವ್ಯಕ್ತಿಯಾಗಿದ್ದರೆ, ವಾಸ್ತವಾಂಶವನ್ನು ವಿವರಿಸಿ ಪೊಲೀಸ್ ಆಯುಕ್ತರು, ಬೆಂಗಳೂರು ನಗರ ಮತ್ತು ನಮ್ಮ ಕಚೇರಿಯಿಂದ ಕಳುಹಿಸಲಾದ ಪತ್ರಗಳನ್ನು ಪ್ರಕಟಿಸಿ ನಂತರ ಸಾರ್ವಜನಿಕ ಅಭಿಪ್ರಾಯವನ್ನು ಪಡೆಯಬಹುದಾಗಿತ್ತು"

ಹೋಗಿ ಆ ಮೂಲ ಪತ್ರವನ್ನು ನೋಡಿ, ನಿಜಕ್ಕೂ ಅಜಯ ಸಿಂಗರ ಪತ್ರ ಒಂದು Class Act - ವಿಕದ ಒಳಹೂರಣವನ್ನು ಚೆನ್ನಾಗಿ ಬಯಲಿಗೆಳೆದಿದ್ದಾರೆ ಮತ್ತು ವಿಶ್ವೇಶ್ವರ ಭಟ್ಟರ ಆತ್ಮ ಸಾಕ್ಷಿಯನ್ನೇ ಪ್ರಶ್ನಿಸಿದ್ದಾರೆ. "ಪತ್ರಿಕಾ ಸ್ವಾತಂತ್ರ್ಯವೆಂದರೆ ಕೊಲ್ಲಲು ಪರವಾನಿಗೆ ಅಲ್ಲ"ವೆಂಬ ಪದಗಳ ಹಿಂದಿರುವ ಅಜಯ ಸಿಂಹರ ನೋವನ್ನು ವಿಕದ ವರ್ಗಾವಣೆ ಏಜೆಂಟ್ ಗಡಣ, fixerಗಳು ಇನ್ನಾದರೂ ಅರ್ಥ ಮಾಡಿಕೊಳ್ಳಬಹುದೇ?

ವಿಕ ಪ್ರಮುಖ ವ್ಯಕ್ತಿಗಳ ಅಭಿಪ್ರಾಯವನ್ನು ತಿರುಚಿ ಬರೆದು ಡಿಜಿ ವಿರುದ್ಧ ಜನಾಭಿಪ್ರಾಯ ರೂಪಿಸಲು ಪ್ರಯತ್ನಿಸಿದರೆ, ವಿಶ್ವೇಶ್ವರ ಭಟ್ಟರ ಈ ಓರಾಟಕ್ಕೆ ಇತರ main stream ಪತ್ರಿಕೆಗಳಿಂದ, ಮಾಧ್ಯಮಗಳಿಂದ ಯಾವುದೇ ಬೆಂಬಲ ವ್ಯಕ್ತವಾಗಿಲ್ಲ.

ವಿಶ್ವೇಶ್ವರ ಭಟ್ಟರನ್ನು ಬೆಂಬಲಿಸಿದ ಏಕೈಕ ಸಂಪಾದಕ ಯಾರು ಗೊತ್ತೇ? ಮಂಗಳೂರಿನಲ್ಲಿ "ಕರಾವಳಿ ಅಲೆ"ಯೆಂಬ ಸೆಕ್ಸ್ ಪತ್ರಿಕೆ ನಡೆಸುತ್ತಿರುವ ಬಿ.ವಿ.ಸೀತಾರಾಮ್ ಮಾತ್ರ! ಎಂತಹ ವಿಪರ್ಯಾಸ ನೋಡಿ! ಯಾವ ಬಿವಿ ಸೀತಾರಾಂನ್ನು "ಅಂಡೆ ಪಿರ್ಕಿ"ಯೆಂದು ಬಣ್ಣಿಸಿದ್ದ ವಿಶ್ವೇಶ್ವರ ಭಟ್ಟರ ಬೆಂಬಲಕ್ಕೆ ಈಗ ನಿಂತಿರುವುದು ಅದೇ ಅಂಡೆ ಪಿರ್ಕಿ ಸೀತಾರಾಮ!

ವಿಕದ, ವಿಶ್ವೇಶ್ವರ ಭಟ್ಟರ ಅಧ:ಪತನಕ್ಕೆ ಬೇರೇನು ಸಾಕ್ಷಿ ಬೇಕು!??

Thursday, June 17, 2010

ವರ್ಗಾವಣೆ ದಂಧೆಗೆ ಸೊಪ್ಪು ಹಾಕದ ಡಿ.ಜಿ. ಅಜಯ್ ಸಿಂಗ್ ವಿರುದ್ಧ ವಿ.ಕ.ಪತ್ರಕರ್ತ ಗಡವರ ರಣಕಹಳೆ!

ವರ್ಗಾವಣೆ ದಂಧೆಗೆ ಸೊಪ್ಪು ಹಾಕದ ಡಿ.ಜಿ.ಅಜಯ್ ಸಿಂಗ್ ವಿರುದ್ಧ ವಿ.ಕ.ಪತ್ರಕರ್ತ ಗಡವರ ರಣಕಹಳೆ!
ವಿಜಯ ಕರ್ನಾಟಕದ ಸಬ್ ಎಡಿಟರುಗಳಿಂದ ಹಿಡಿದು, ಅಂಕಣಕಾರರು ಸಂಪಾದಕರೆಲ್ಲಾ ವರ್ಗಾವಣೆ ದಂಧೆಯ ಸೈಡು ಬ್ಯುಸಿನೆಸ್ ನಡೆಸುವುದು ವಿಧಾನಸೌಧ ಯಡ ತಾಕುವವರೆಲ್ಲರಿಗೂ ಗೊತ್ತಿರುವಂತ್ತದ್ದೇ.

ಯಾವಾಗ ಬಿಜೆಪಿ ಸರಕಾರ ಅಧಿಕಾರಕ್ಕೆ ಬಂತೋ ಆ ದಿನದಿಂದಲೇ "ಈ ಸರ್ಕಾರ ಅಧಿಕಾರಕ್ಕೆ ಬಂದದ್ದು ನಮ್ಮ ಪತ್ರಿಕೆಯಿಂದಾಗಿಯೇ" ಎಂದು ವಿಜಯ ಕರ್ನಾಟಕದ ಅಂಕಣಕಾರರು, ಸಂಪಾದಕರು ಹೇಳಿಕೊಂಡು ತಿರುಗುತ್ತಿದ್ದಾರೆ ಎಂಬುದು ಸುಳ್ಳಲ್ಲ.

ಪ್ರಭಾವೀ ಖಾತೆಗಳ ಸಚಿವರ ಅಟೆಂಡರುಗಳು, ಪಿ.ಎ.ಗಳೇ "ಸಾರ್ ವಿಕ ಭಟ್ಟರ ಹತ್ತಿರ ಫೋನು ಮಾಡಿಸಿ" ಎಂದೋ, "ತ್ಯಾಗರಾಜ್ ಶೋಭಕ್ಕರಿಗೆ ಕ್ಲೋಸು, ಅವರ ಬಳಿ ಸಾಹೇಬ್ರಿಗೆ ಫೋನ್ ಮಾಡಿಸಿ"ಯೆಂದೋ ವಿ.ಕ.ಪತ್ರಕರ್ತರ ಅಂಕಣಕಾರರ ಖಾಸಗೀ ಮೊಬೈಲ್ ನಂಬರ್ ನೀಡುತ್ತಾರೆ.

ಇನ್ನು ಡಿ.ಆರ್.ಅಶೋಕರಾಮ್ ಎಂಬ ವಿ.ಆರ್.ಎಲ್.ಕಂಪೆನಿಯ ಕಾರಖೂನ ಕಮ್ "ವಿ.ಕ.ಅಂಕಣಕಾರ" ಅತ್ತ ಎಂ.ಎಲ್.ಸಿ. ವಿಜಯಾನಂದರೆ ಹೆಸರಲ್ಲಿ, ಇತ್ತ ಬಳ್ಳಾರಿ ರೆಡ್ಡಿಗಳ ಏಜೆಂಟರಂತೆ ಇದ್ದ ಬಿದ್ದ ಸಚಿವರ ಮನೆಗಳಲ್ಲಿ ಕಚೇರಿಗಳಲ್ಲಿ ಕಂಡು ಬರುತ್ತಾರೆ.

ಶಾಲಾ ಶಿಕ್ಷಕರ ವರ್ಗಾಣೆಯಿಂದ ಹಿಡಿದು ಉನ್ನತ ಶಿಕ್ಷಕ ಇಲಾಖೆ (ಹೇಗೂ ಲಿಂಬಾವಳಿ "ನಮ್ಮ ಎಬಿವಿಪಿ ಹುಡುಗ" ನೋಡಿ), ಶೋಭಕ್ಕ ಇದ್ದಾಗ ಪಂಚಾಯತಿ ಇಲಾಖೆ, ಪಶು ವೈದ್ಯಕೀಯ ಇಲಾಖೆ, ಸರಕಾರೀ ಮೆಡಿಕಲ್ ಕಾಲೀಜುಗಳ ಗುಮಾಸ್ತರಿಂದ ಹಿಡಿದು ಪೋಲಿಸ್ ಇಲಾಖೆಯ ವರ್ಗಾವಣೆಯಲ್ಲೂ ವಿ.ಕ.ದ ಪತ್ರಕರ್ತ ಮಿತ್ರರು ಕೈಯಾಡಿಸುವುದು ಖಮಾಯಿಸುವುದು ವಿಧಾನಮಂಡಲ ಬೀಟ್ ನ ಎಲ್ಲರಿಗೂ ತಿಳಿದಿರುವ ಸಂಗತಿ.
ಆದರೆ ಯಾವಾಗ ಸುಪ್ರೀಂ ಕೋರ್ಟ್ ಆದೇಶದಂತೆ ಸರಕಾರ ಪೋಲೀಸ್ ವರ್ಗಾವಣೆ ಬೋರ್ಡ್ ಸ್ಥಾಪಿಸಿತೋ, ಅಂದಿನಿಂದ ಈ ವಿ.ಕ. ಪತ್ರಕರ್ತ coterie ಗೆ ಪೋಲಿಸ್ ಇಲಾಖೆಯ ವರ್ಗಾವಣೆ ಕೆಲಸವಿಲ್ಲದಂತಾಗಿ ಹೋಗಿ ಮೈ ಪರೆಚುಕೊಳ್ಳುತ್ತಿದ್ದಾರೆ.

ಇದರ ಪರಿಣಾಮವೇ ಇದ್ದಕ್ಕಿದ್ದಂತೆ ಯಾವುದೋ ಅನಾಮಧೇಯ ಪತ್ರದ ಜಾಡು ಹಿಡಿದು ಪೇದೆ ವಿ.ಕ.ದ ಕಚೇರಿಗೆ ಹೋದದ್ದನ್ನೇ ನೆಪ ಹಿಡಿದು ಡಿ.ಜಿ. ಅಜಯ್ ಸಿಂಗರ ವಿರುದ್ಧ ಕೀಳಭಿರುಚಿಯ ವರದಿಗಳನ್ನು ವಿಜಯ ಕರ್ನಾಟಕ ಪ್ರಕಟಿಸಿ ನಮ್ಮ ಕಾನೂನು ಪಾಲಕರನ್ನು ಕುಗ್ಗಿಸುವ ಕೆಲಸ ಮಾಡುತ್ತಿರುವುದು ಖಂಡನೀಯ.

ಅದೂ ನಕ್ಸಲರಂತಹ ಹೇಡಿಗಳು ಪೋಲಿಸರ ರುಂಡ ಚೆಂಡಾಡುತ್ತಿರುವಾಗ ಪೋಲಿಸರ ಹಿಂದಿರುವ ಬದಲು ಕೇವಲ ತಮ್ಮ ವರ್ಗಾವಣೆ ಶಿಫಾರಸುಗಳಿಗೆ ಸೊಪ್ಪು ಹಾಕಿಲ್ಲವೆಂದು ಅಜಯ್ ಸಿಂಗರಂತಹ ಪ್ರಾಮಾಣಿಕ ಅಧಿಕಾರಿಗಳನ್ನು ಹೀಯಾಳಿಸಿ ಬರೆಯುವುದು "ವಿಜಯ ಕರ್ನಾಟಕ" ಸಂಪಾದಕೀಯ ಮಂಡಳಿಗೆ "ಶೋಭೆ" ತರುವ ವಿಷಯವಲ್ಲ.

ಕರ್ನಾಟಕ ಇತ್ತೀಚಿನ ದಿನಗಳಲ್ಲಿ ಕಂಡ ಸಭ್ಯ ಅಧಿಕಾರಿಗಳಲ್ಲಿ ಅಜಯ್ ಸಿಂಗ್ ಒಬ್ಬರು. ವರ್ಗಾವಣೆ ದಂಧೆಯನ್ನು ಯಕ:ಶ್ಚಿತ್ ನಿಲ್ಲಿಸಿರುವ ಅಜಯ್ ಸಿಂಗ್ CM ಕಚೇರಿಯಿಂದ ಬಂದ ಶಿಫಾರಸುಗಳನ್ನೇ ಕಡೆಗಣಿಸಿರುವಾಗ ವಿಜಯ ಕರ್ನಾಟಕದ ದಲ್ಲಾಳಿ ಪತ್ರಕರ್ತರನ್ನು ಸಂಪೂರ್ಣವಾಗಿ ಕಡೆಗಣಿಸಿರುವುದು ಸರಿಯಾಗಿಯೇ ಇದೆ.

ತಾವೇ ಸೂಪರ್ ಮಿನಿಸ್ಟರ್, ತಾವೇ ಸೂಪರ್ ಗವರ್ಮೆಂಟು ಎಂದು ಬೀಗುತ್ತಿದ್ದ ವಿ.ಕ.ದ ಭಟ್ಟರು, ತ್ಯಾಗರಾಜ್ ಅಶೋಕರಾಮ್ ರಂತಹ ದಲ್ಲಾಳಿಗಳು ಅಜಯ್ ಸಿಂಗರಂತಹ ಅಧಿಕಾರಿಗಳ ವಿರುದ್ಧ ಏನೇನೋ ದಿನಗಟ್ಟಳೆ ಬರೆದರೆ ಜನರು ನಂಬುತ್ತಾರೆ ಎಂಬ ಭ್ರಮೆಯಿಂದ ಹೊರಬಂದು ಆತ್ಮಾವಲೋಖನ ಮಾಡಿಕೊಳ್ಳಬೇಕಾಗಿದೆ.

**************
ಕೊನೆ ಮಾತು: ಶೋಭಕ್ಕನನ್ನು ಹಿಗ್ಗಾ ಮುಗ್ಗ ಹೊಗಳುವ ತ್ಯಾಗರಾಜ್, ಅಶೋಕರಾಮರಂತಹ ವರ್ಗಾವಣೆ ದಲ್ಲಾಳಿಗಳಿಗೊಂದು ಪ್ರಶ್ನೆ - ಶೋಭಕ್ಕ ಇತ್ತೀಚೆಗೆ ಮಾನಸ ಸರೋವರಕ್ಕೆ ಹೋಗಿ ಬಂದರು ತಾನೆ? ಅತ್ತ ಬಡ ಯಾತ್ರಿಕರು ಬಸ್ಸಿನಲ್ಲಿ, ಜೀಪಿನಲ್ಲಿ ಒದ್ದಾಡಿಕೊಂಡು ಮಾನಸ ಸರೋವರಕ್ಕೆ ಹೋದರೆ, ಶೋಭಕ್ಕ ಹೆಲಿಕಾಪ್ಟರಿನಲ್ಲಿ ಬುರ್ರೆಂದು ನೇಪಾಳ ಚೀನಾ ಹೋಗಲು ಆದ ಖರ್ಚು ಎಷ್ಟು ಎಂದು ಕೇಳುವ ಧೈರ್ಯ ತಮಗಿದೆಯೇ? ಯಾವುದೇ ಆದಾಯವಿಲ್ಲದೇ ಯಕ:ಶ್ಚಿತ್ ಎಂ.ಎಲ್.ಎ. ಆಗಿರುವ ಶೋಭಕ್ಕನಿಗೆ ಹೀಗೆ ಕೋಟ್ಯಾಂತರ ರೂಪಾಯಿ ಸಿಕ್ಕಿದ್ದು ಎಲ್ಲಿಂದ?

ಯಾವುದೋ ಹಳಸಲು "ಸುದ್ದಿಮನೆ" ಬದಲು ಅಥವಾ "ಹಾಲಪ್ಪ tape" ಎಂಬ political manipulatative ಗೆ ಬಲಿಬಿದ್ದು "ನಮ್ಮದು ತನಿಖಾ ಪತ್ರಿಕೋದ್ಯಮ" ಎಂದು ಕೊಚ್ಚಿಕೊಳ್ಳುವ ಬದಲು, ಒಂದಿನಿತೂ ಆದಾಯವಿಲ್ಲದೆಯೂ ಕೋಟ್ಯಾಂತರ ರೂಪಾಯಿ ಖರ್ಚು ಮಾಡಿ ಮಾನಸ ಸರೋವರಕ್ಕೆ ಬುರ್ರೆಂದು ಹಾರಿಹೋದ ಶೋಭಕ್ಕರ finance ಮಾಡಿದ್ದು ಯಾರೆಂದು ಹುಡುಕಿ ನಿಜವಾದ ಪತ್ರಿಕೋದ್ಯಮ ಏನೆಂದು ತೀರಿಸುವ ತಾಖತ್ತು "ವಿಜಯ ಕರ್ನಾಟಕ"ದ ಪತ್ರಕರ್ತರೆಂಬ ವರ್ಗಾವಣೆ ಏಜೆಂಟರುಗಳಿಗಿದೆಯೇ?
&&&&&

Monday, January 11, 2010

ವಿ.ಕ.ಭಟ್ಟರ ನಿಗೂಢ ನಡೆಗಳು - ಎರಡು ಸ್ಯಾಂಪಲ್

ಕಳೆದೆರಡು ವಾರದಿಂದ ನೋಡುತ್ತಿದ್ದೇನೆ. "ವಿಜಯ ಕರ್ನಾಟಕ"ದ ವಿಶ್ವೇಶ್ವರ ಭಟ್ಟರು ಓದುಗರ ಬುದ್ಧಿಮತ್ತೆಯನ್ನು ಸ್ವಲ್ಪ underestimate ಮಾಡಿದಂತಿದೆ. ಇಲ್ಲವಾದರೆ ಓದುಗರ ಕಿವಿ ಮೇಲೆ ಹೂವಿಡಲು ಯಾಕೆ ಯತ್ನಿಸುತ್ತಿದ್ದಾರೆ ಇವರು?

ಸ್ಯಾಂಪಲ್ ನಂ.೧: ವಿ.ಕೆ.ಮತ್ತು ರೇಣುಕಾ ನಡುವೆ ಡೀಲ್?

ಅತ್ತ ರೋಮಿಯೋ ರೇಣುಕಾಚಾರ್ಯ ಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸುತ್ತಿದ್ದಂತೆ ಮೊದಲ ಪುಟದ ಸಂಪಾದಕೀಯದಲ್ಲೇ ಶೇಮ್ ಎಂದು ವಿಶ್ವೇಶ್ವರ ಭಟ್ಟರು ಷರಾ ಬರೆದರು. ಅದೂ ಸಾಲದಂತೆ ಸತತ ಎರಡು ಮೂರು ದಿನ ರೇಣುಕಾಚರ್ಯ ಬಗ್ಗೆ usual SMS ಮೆಸೇಜುಗಳನ್ನು ಸಂಗ್ರಹಿಸಿ (ಅಥವಾ "ಸೃಷ್ಟಿಸಿ") ಪೇಜುಗಟ್ಟಳೆ ಬರೆದರು. ಆದರೆ ನಾಲ್ಕನೇ ದಿನ ಇದ್ದಕ್ಕಿದ್ದಂತೆ ಇದೆಲ್ಲಾ ಬಂದ್ - ರೇಣುಕಾಚಾರ್ಯ ವಿರೋಧೀ ಕಮೆಂಟು ಬಿಡಿ, ರೇಣುಕಾಚಾರ್ಯರು ತಮ್ಮ ಇಲಾಖೆಗೆ ಸಂಬಂಧಿಸಿದ ಹೇಳಿಕೆಗಳನ್ನೇ prime ಜಾಗದಲ್ಲಿ position ಮಾಡಿ ಓದುಗರಿಗೆ ಅಚ್ಚರಿ ಮೂಡಿಸಿದರು.
ಎಲ್ಲವೂ ಉಲ್ಟಾ ಪಲ್ಟಾ! ದಿನಗಟ್ಟಳೆ ರೇಣುಕಾಚಾರ್ಯ ವಿರುದ್ಧ ಬರೆದು ಇದ್ದಕ್ಕಿದ್ದಂತೆ ರೇಣುಕಾಚಾರ್ಯರ ಹಳಸಿದ ಹೇಳಿಕೆಗಳಿಗೆ prime spot ಕೊಟ್ಟಿರುವುದರ ರಹಸ್ಯವೇನಿರಬಹುದು? ಇದೇ trend ಮುಂದುವರೆದಿದೆ. ಪ್ರತಿನಿತ್ಯವೆಂಬಂತೆ ರೇಣುಕಾಚಾರ್ಯ ಏನೋ ಹೇಳಿದ್ದನ್ನೇ ಪರಮಾನ್ನವೆಂದು ವಿ.ಕೆ.ಪ್ರಕಟಿಸುತ್ತಿದೆ. ಮುಖ್ಯಮಂತ್ರಿಯ ಬಳಿಕ ಮಂತ್ರಿಗಳಲ್ಲಿ ವಿ.ಕೆ.ಯಲ್ಲಿ ಪ್ರಾಯಷ: ರೇಣುಕಾಚಾರ್ಯರ ಹೇಳಿಕೆಗಳದ್ದೇ ಭರಾಟೆ. ಹೀಗೆ ಸಡನ್ನಾಗಿ ತನ್ನ position ಬದಲಿಸಲು ಕಾರಣವೇನಿರಬಹುದು? ವಿ.ಕೆ.ಮತ್ತು ರೇಣುಕಾಚಾರ್ಯ ನಡುವೆ ಡೀಲ್ ಕುದುರಿತೇ? ಹೀಗೆಂದು ಓದುಗರು ಭಾವಿಸಿದರೆ ತಪ್ಪೇನಿಲ್ಲ.

ಕರ್ನಾಟದ ಹಿರಿಯ ಪತ್ರಕರ್ತರಾದ ದು.ಗು.ಲಕ್ಷ್ಮಣರೂ ಇದನ್ನೇ ಕಳೆದ ವಾರ ಹೇಳಿದ್ದಾರೆ ("ರೇಣುಕಾಚಾರ್ಯ ಮಂತ್ರಿಯಾಗಿದ್ದು "ಶೇಮ್" ಎಂದು ಮುಖಪುಟದಲ್ಲಿ ಸಂಪಾದಕೀಯ ಬರೆದು ಅನಂತರ ಒಂದೆರಡು ದಿನ ಈ ಪ್ರಕರಣಕ್ಕೆ ಭರ್ಜರಿ ಪ್ರಚಾರ ನೀಡಿದ್ದ "ವಿ"ಖ್ಯಾತ ಪತ್ರಿಕೆಯೊಂದು ಆಮೇಲೆ ತಣ್ಣಗಾಗಿದೆ! ಈ ಮಧ್ಯೆ ಅದೇನು "ಡೀಲ್" ನಡೆಯಿತೋ ಗೊತ್ತಿಲ್ಲ!" - ಹೊಸದಿಗಂತ ಜನವರಿ ೪ ೨೦೧೦) ಮಾಧ್ಯಮ ಲೋಕದಲ್ಲಿ ನಡೆಯುತ್ತಿರುವ ಭೃಷ್ಟಾಚಾರದ ಬಗ್ಗೆ ಬರೆಯುತ್ತಾ ರೇಣುಕಾಚಾರ್ಯ ಪ್ರಕರಣದಲ್ಲಿ ವಿ.ಕೆ. ಡೀಲ್ ಮಾಡಿಕೊಂಡಿದೆಯೆಂದು ನೇರವಾಗಿ ಹೇಳಿದ್ದಾರೆ.

ಸ್ಯಾಂಪಲ್ ನಂ.೨: ಕೋಟ್ಯಾಧಿಪತಿ ಬಹರೇನಿನ ಅನಿವಾಸಿ ಭಾರತೀಯರಿಗೇಕೆ ಖಜಾನೆ ಖಾಲಿಯಾಗಿರುವ ಕರ್ನಾಟಕ ಸರಕಾರದ ಭಿಕ್ಷೆ?

ಜನವರಿ ಹತ್ತರ ಅಂಕಣದಲ್ಲಿ ಬಹರೇನ್ ಕನ್ನಡ ಸಂಘಕ್ಕೆ ಕರ್ನಾಟಕ ಸರಕಾರ ಒಂದು ಕೋಟಿ ಅನುದಾನ ಕೊಟ್ಟಿಲ್ಲವೆಂದು ಕೊರೆದಿದ್ದಾರೆ. ಅಲ್ಲಾ ಸ್ವಾಮಿ, ಇಡೀ ಉತ್ತರ ಕರ್ನಾಟಕ ನೆರೆಯಲ್ಲಿ ಕೊಚ್ಚಿ ಹೋಗಿದೆ, ಅತ್ತ ಸರಕಾರದ ಖಜಾನೆ ಖಾಲಿಯಾಗಿದೆ. ಹೀಗಿರುವಾಗ ಬಹರೇನ್ ಎಂಬ ಸಂಪತ್ಭರಿದ ದೇಶಕ್ಕೆ ಒಂದು ಕೋಟಿ ರೂಪಾಯಿಯನ್ನೇಕೆ ನಾವು ತೆರಿಗೆದಾರರು ಕೊಡಬೇಕು?
ನಾನೂ ಬಹರೇನ್ ಹೋಗಿದ್ದೇನೆ (ಎರಡು ವರುಷಗಳ ಹಿಂದೆ ಅಕ್ಕನ ಮನೆಗೆ). ಅಲ್ಲಿ ಕರ್ನಾಟಕ ಸಂಘ ಬಹಳ active ಇದೆ ಎಂಬುದು ಸತ್ಯ - ಆದರೆ ಪ್ರ‍ಾಯಷ ಎಲ್ಲಾ NRI ಗಳಂತೆ weekend ನಲ್ಲಿ ಮಾತ್ರ ಎಲ್ಲಾ activity. ಅಲ್ಲೂ ಈಗ ಹಿಂದೂ-ಮುಸ್ಲಿಂ-ಕ್ಯೆಥೋಲಿಕ್-ಕರಾವಳಿ ಕನ್ನಡಿಗರು-ಗೌಡರು-ಶೆಟ್ಟರು-ಬಿಲ್ಲವರು ಎಂದೆಲ್ಲಾ ಗುಂಪುಗಳಿವೆ. ಕೆಲ ಲಿಂಕುಗಳನ್ನು ನೋಡಿ ಮೊಗವೀರ ಬಹರೇನ್, ಬಿಲ್ಲವಾಸ್ ಬಹರೇನ್, ಬಂಟ್ಸ್ ಬಹರೇನ್, ಕೊಂಕಣ ಅಸೋಸಿಯೇಶನ್, ಮುಸ್ಲಿಂ ಅಸೋಸಿಯೇಶನ್. ಇವತ್ತು ಒಬ್ಬರಿಗೆ ಕೊಟ್ಟರೆ ನಾಳೆ ಇನ್ನೊಬ್ಬರು ಸನ್ಮಾನ ಮಾಡಿ ಒಂದು ಕೋಟಿಗೆ ಡಿಮಾಂಡ್ ಇಡುವುದಿಲ್ಲವಲ್ಲವೇ?

ಮರುಭೂಮಿಯಲ್ಲಿ tax free ಹಣ ಕಮಾಯಿಸಲು ಹೋಗಿರುವ ಈ ಅನಿವಾಸಿಗಳಿಗೆ time pass ಮಾಡಲು ಮಾಲುಗಳನ್ನು ಬಿಟ್ಟರೆ ಬೇರೇನೂ ಇಲ್ಲ. ಅದಕ್ಕೇ ಕರ್ನಾಟಕದಿಂದ ರಾಜಕಾರಣಿಗಳನ್ನು, ಕಲಾವಿದರನ್ನು ಕರೆಯಿಸಿ ಪ್ರತಿವಾರವೆಂಬಂತೆ ಕಾರ್ಯಕ್ರಮವಿಟ್ಟುಕೊಂಡಿರುತ್ತಾರೆ. ಇಂತಹ long distance ಕನ್ನಡಿಗರಿಂದ, picnic typeನ boredom busterಇಂದ ಕರ್ನಾಟಕದ ಉದ್ದಾರವಾಗುತ್ತದೆಯೆಂಬುದು ಭ್ರಮೆಯಷ್ಟೇ! ಇಂಗ್ಲಿಷ್ ಬೋರ‍್ಡಿಗೆ ಕಲ್ಲು ಹೊಡೆಯುವುದರಿಂದ ಕನ್ನಡ ಉಳಿಯುತ್ತದೆ ಎಂಬ ಕರ್ನಾಟಕ ರಕ್ಕಸ ವೇದಿಕೆಯ ಪಡ್ಡೆಗಳ ಭ್ರಮೆಯಂತೆ.

ಬಹರೇನ್ ಕನ್ನಡಿಗರು ಮನಸು ಮಾಡಿದರೆ ಒಂದು ಕೋಟಿಯನ್ನು ಒಂದು weekend party ಅಥವಾ kitty partyಯಲ್ಲೇ ಒಟ್ಟು ಮಾಡಬಹುದು. ಕನ್ನಡಿಗರಲ್ಲೇ ಬಹರೇನಿನಲ್ಲಿ ನೂರಾರು ಕೋಟ್ಯಾಧಿಪತಿಗಳಿದ್ದಾರೆ - ಹೀಗಿರುವಾಗ ತನ್ನನ್ನು ಕರೆದು ಸನ್ಮಾನಿಸಿದರು ಎಂದ ಮಾತ್ರಕ್ಕೆ ಅದರ ಋಣ ತೀರಿಸಲು ವಿಶ್ವೇಶ್ವರ ಭಟ್ಟರು ಕರ್ನಾಟಕ ಸರಕಾರವನ್ನು, ಮುಖ್ಯಮಂತ್ರಿಗಳನ್ನು, NRI Cellನ ಗಣೇಶ್ ಕಾರ್ಣಿಕರನ್ನು ಹೀಗೆಳೆದದ್ದು ಸರಿ ಕಾಣಲಿಲ್ಲ. ಕರ್ನಾಟಕದ ಎಷ್ಟೋ ಹಳ್ಳಿಗಳು ನೀರು ವಿದ್ಯುತ್ ಶಾಲೆಗಳಿಲ್ಲದೆ ಜನರು ಒದ್ದಾಡುತ್ತಿರುವಾಗ ಬಹರೇನಿನಂತಹ ಶ್ರೀಮಂತ ರಾಷ್ಟ್ರದ ಶ್ರೀಮಂತ ಕನ್ನಡಿಗರ weekend party ಗಳಿಗೆ ಬಡ ಬೋರೇ ಗೌಡನ ತೆರಿಗೆ ಕಳಿಸಬೇಕಾದ ಪ್ರಾರಬ್ಧವೇನಿದೆ?

ವಿ.ಭಟ್ಟರ ನಿಜವಾದ ಟಾರ್ಗೆಟಿಲ್ಲಿ ಗಣೇಶ್ ಕಾರ್ಣಿಕ್! ಕೆಲ ವಾರಗಳ ಹಿಂದೆ ಇದೇ ಗಣೇಶ್ ಕಾರ್ಣಿಕ್ ಮೇಲೆ ವಿ.ಕ. ಹಿಗ್ಗಾ ಮುಗ್ಗ ಬರೆದಿತ್ತು. ನನ್ನ ಮೂಲಗಳ ಪ್ರಕಾರ, ಭಟ್ಟರಿಗೆ ಯಡ್ಯೂರಪ್ಪನವರು ತಾನು ಹೇಳಿದ ಕ್ಯಾಂಡಿಡೇಟ್ ವಿ.ಕ. ಅಂಕಣಕಾರ ಅಮೆರಿಕದ ಶ್ರೀವತ್ಸ ಜೋಶಿಯನ್ನು NRI Cellನ coordinator ಮಾಡಿಲ್ಲವೆಂಬ ಆಕ್ರೋಶವಿದೆ. Wikipediaದಿಂದ ಲೇಖನಗಳನ್ನು ಭಟ್ಟಿ ಇಳಿಸಿದ್ದನ್ನೇ "ಪರಾಗ ಸ್ಪರ್ಶ"ವೆಂದು ಬಡಿಸುವ ಶ್ರೀವತ್ಸ ಜೋಶಿಯನ್ನು NRI Cell Coordinator ಮಾಡಬೇಕೆಂದು ಭಟ್ಟರು ಬಹಳ ಪ್ರಯತ್ನಿಸಿದ್ದರೆಂದು ಹೇಳಲಾಗಿದೆ.

ಚಿತ್ರದುರ್ಗದ ಎಂ.ಪಿ. ಅಭ್ಯರ್ಥಿಯಾಗಿ NRI ಜನಾರ್ಧನ ಸ್ವಾಮಿಯನ್ನು ಭಟ್ಟರು ಅದೇ ಅಂಕಣದಲ್ಲಿ ಜನಾರ್ಧನ ಸ್ವಾಮಿ ಅಮೆರಿಕ ಬಿಟ್ಟು ದೇಶ ಸೇವೆಗೆ ಬರುತ್ತಿದ್ದಾರೆ, ಆದರ್ಶವಾದಿ ಎಂದೆಲ್ಲಾ ಪ್ರಮೋಟ್ ಮಾಡಿದ್ದನ್ನು ನೆನೆಪಿಸಿಕೊಳ್ಳಬೇಕಾಗಿದೆ. ಈ NRI ಆಸಾಮಿ "ಆದರ್ಶವಾದಿ" ಜನಾರ್ಧನ ಸ್ವಾಮಿ, ಎಂ.ಪಿ.ಯಾದ ಕೂಡಲೇ ಮಾಡಿದ ಮೊದಲ ಕೆಲಸ ಮುಖ್ಯಮಂತ್ರಿಯ ಖೋಟಾದಡಿ BDA site sanction ಮಾಡಿಸಿಕೊಂಡದ್ದು. ಅಲ್ಲಾ ಈ NRI ಗಳು ಎಲ್ಲೆಲ್ಲೋ ಹೋಗಿ ಕೋಟಿಗಟ್ಟಳೆ ಕಮಾಯಿಸಿದರೂ ಭಾರತದ ಬಡ ಜನರ, ಭಾರತದ ತೆರಿಗೆದಾರರ ಜೀವ ಹಿಂಡಲು ಪುನ: ಮರಳಿ ಬಂದು ಯಾಕೆ ಒಕ್ಕರಿಸುತ್ತಾರೋ ನನಗೆ ಅರ್ಥವಾಗುತ್ತಿಲ್ಲ. ಏನೇ ಇರಲಿ ಕರ್ನಾಟಕದ ಜನತೆ ಈ NRIಗಳ ಬಗ್ಗೆ, NRIಗಳ ಸನ್ಮಾನ ಸ್ವೀಕರಿಸಿ ಅವರ ಪರ ವಾದಿಸುವ ಭಟ್ಟರಂಥವರಾ ಬಗ್ಗೆ ಜಾಗ್ರತೆಯಿಂದಿರಬೇಕಾಗಿದೆ.


ಏನೇ ಇರಲಿ ಕರ್ನಾಟಕದ ಜನತೆ ಈ NRIಗಳ ಬಗ್ಗೆ, NRIಗಳ ಸನ್ಮಾನ ಸ್ವೀಕರಿಸಿ ಅವರ ಪರ ವಾದಿಸುವ ಭಟ್ಟರಂಥವರಾ ಬಗ್ಗೆ ಜಾಗ್ರತೆಯಿಂದಿರಬೇಕಾಗಿದೆ.

Sunday, March 29, 2009

ಮಾಧ್ಯಮ ಮಿತ್ರರ ಕೋಳಿ ಜಗಳ ನೋಡೋ ಬಾರಾ: ವಿಶ್ವೇಶ್ವರ ಭಟ್ vs ರವಿಕೃಷ್ಣಾ ರೆಡ್ಡಿ!

ಮಾಧ್ಯಮ ಮಿತ್ರರ ಕೋಳಿ ಜಗಳ ನೋಡೋ ಬಾರಾ: ವಿಶ್ವೇಶ್ವರ ಭಟ್ vs ರವಿಕೃಷ್ಣಾ ರೆಡ್ಡಿ!


ಊರಿಗೆಲ್ಲಾ ಉಪದೇಶ ಮಾಡುವ ಮಾಧ್ಯಮ ಮಿತ್ರರು ತಮ್ಮೊಳಗೇ ಜಗಳ ಮಾಡಿಕೊಂಡು ಒಳಗಿನ ರಾಡಿಯನ್ನು ಹೊರಹಾಕುವುದನ್ನು ನೋಡುವುದೇ ಚೆಂದ.

ಒಂದೆಡೆ "ವಿಕ್ರಾಂತ ಕರ್ನಾಟಕ"ವೆಂಬ ಅನಿಯಮಿತ ವಾರಪತ್ರಿಕೆ - ಒಂದು ವಾರ ಮಾರುಕಟ್ಟೆಗೆ ಬಂದರೆ ಮತ್ತೆರಡು ವಾರ ನಾಪತ್ತೆ ಈ ಪತ್ರಿಕೆ! - ಸ್ಥಾಪಿಸಿದ ಅದೇ ಹಳಸಲು ಔಟ್ ಡೇಟೆಡ್ ಲಂಕೇಶ್ ಚಿಂತನೆಯ ಕೆಲಸವಿಲ್ಲದ ಟೆಕ್ಕಿ ರವಿಕೃಷ್ಣಾ ರೆಡ್ಡಿ.

ಇನ್ನೊಂದೆಡೆ "ವಿಜಯ ಕರ್ನಾಟಕ"ದ ಸಂಪಾದಕ ವಿಶ್ವೇಶ್ವರ ಭಟ್ಟರು.

ಇಬ್ಬರೂ ತಮ್ಮ ತಮ್ಮ ಪತ್ರಿಕೆಗಳಲ್ಲಿ ಇನ್ನೊಬ್ಬರ ವಿರುದ್ಧ ಬರೆದುಕೊಂಡು ಓದುಗರಿಗೆ ಪುಕ್ಕಟೆ ಮನೋರಂಜನೆ ನೀಡುತ್ತಿದ್ದಾರೆ.

ಮೊದಲ ಫಿರಂಗಿ ಸಿಡಿಸಿದ್ದು ರವಿಕೃಷ್ಣಾ ರೆಡ್ಡಿಗಾರು. ಯಡ್ಡ್ಯೂರಪ್ಪ ವಿರೋಧೀ ಪತ್ರಿಕಾವರದಿಗಳನ್ನು ಪ್ರಕಟಿಸುವುದರ ಮೂಲಕ ಅನಂತಕುಮಾರರ ಭಟ್ಟಂಗಿ ಕೆಲಸವನ್ನು ವಿಶ್ವೇಶ್ವರ ಭಟ್ ಮಾಡುತ್ತಿದ್ದಾರೆಯೆಂಬುದು ಅವರ ಮಾರ್ಚ್ ೨೦ರ ಅಂಕಣದ ತಿರುಳು. "ಅನಂತ ನಿಷ್ಠ ಭಟ್" ಎಂಬ ಹೆಡ್ಡಿಂಗ್ ಮೂಲಕ ಪ್ರಕಟವಾದ ಈ ಲೇಖನವನ್ನು ರವಿಕೃಷ್ಣಾ ರೆಡ್ಡಿಯ ಬ್ಲಾಗಲ್ಲೂ ನೋಡಬಹುದು.

ವಿಶ್ವೇಶ್ವರ ಭಟ್ಟರು ಸುಮ್ಮನೆ ಬಿಡುತ್ತಾರೆಯೇ? ತಮ್ಮದೇ ಶೈಲಿಯಲ್ಲಿ ಅವರ ಭಾನುವಾರದ ಅಂಕಣದಲ್ಲಿ ರವಿ ಕೃಷ್ಣಾ ರೆಡ್ಡಿಗೆ ಸರಿಯಾಗಿಯೇ ಜಡಿದಿದ್ದಾರೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಅದಾವುದೋ ಮೌಲ್ಯಾಗ್ರಹದ ಹೆಸರಲ್ಲಿ ದೊಡ್ಡದೊಡ್ಡ ಬಡಾಯಿ ಕೊಚ್ಚಿಕೊಂಡು, ಉಪವಾಸ ಮಾಡಿ ಬಿಟ್ಟಿ ಪ್ರಚಾರ ಪಡೆದುಕೊಂಡರೂ ಕೇವಲ ೨೦೦ ಮತಗಳನ್ನು ಪಡೆದ ರವಿಕೃಷ್ಣಾ ರೆಡ್ಡಿ ಬಗ್ಗೆ ಕನಿಕರ ವ್ಯಕ್ತಪಡಿಸಿದ್ದಾರೆ. ಚುನಾವಣೆಗೆ ಈ-ಮೇಲ್ ಮೂಲಕ ಸಂಗ್ರಹಿಸಿದ ೪.೨೦ ಲಕ್ಷ ರೂಪಾಯಿಗೇನಾಯಿತೆಂದು ಕೇಳಿದ್ದಾರೆ.

ಒಂದೆಡೆ ನೋಡಿದಾಗ ಭಟ್ಟರು ಈ ರೆಡ್ಡಿಗೆ ಜಡಿದದ್ದು ಕಮ್ಮಿಯೇ ಆಯಿತೆಂದೆನಿಸುತ್ತದೆ.

ಸ್ವಂತ ಯೋಚನೆಯಿಲ್ಲದೆ ಲಂಕೇಶ್ ಹಳಸಲು ಯೋಚನೆಗಳಿಗಿಂದ ಹೊರಬಾರದೆ, ದೂರದ ಅಮೆರಿಕಾದಲ್ಲಿ ಕುಳಿತು ಇಂಟರನೆಟ್ಟುಗಳಲ್ಲಿ ತನ್ನ ಪೆದ್ದು ಮುಖದ ವೀಡಿಯೋಗಳನ್ನು ತಾನೇ ಮಾಡಿಕೊಂಡು ಆದರ್ಶವಾದಿಯಂತೆ ಪೋಸು ಕೊಡುವ ರವಿಕೃಷ್ಣಾ ರೆಡ್ಡಿಯ ನೋಡಿದರೆ ನಗು ಬರುತ್ತದೆ.


ಅಮೆರಿಕದಲ್ಲಿ ಕೆಲಸವಿಲ್ಲದಾಗ ಭಾರತಕ್ಕೆ ಬಂದು ವಿಚಾರಗೋಷ್ಠಿಯ ಹೆಸರಲ್ಲಿ ತನ್ನಂತೆಯೇ ಲಂಕೇಶ್ ಪ್ರಪಂಚದಿಂದ ಹೊರಬರದ ಸಮಾನಮನಸ್ಕರ ಜೊತೆ ಕೂತು ಎಲ್ಲರನ್ನೂ ಬೋರು ಹೊಡೆಸುವ ಆಸಾಮಿ ಈ ರವಿಕೃಷ್ಣಾ ರೆಡ್ಡಿ.

ದೇಶ ದ್ರೋಹಿ ನಕ್ಸಲರೊಂದಿಗೆ ಈ-ಮೇಲ್ ಹಂಚಿಕೊಳ್ಳುವ ಈ ರವಿಕೃಷ್ಣಾ ರೆಡ್ಡಿ ಇವತ್ತೂ ಉಡುಪಿಯಲ್ಲಿ ಜನಪರ ವೇದಿಕೆಯೆಂಬ ನಕ್ಸಲ್ ಪ್ರೇಮಿ ಸಂಘಟನೆಯ ಜೊತೆ ಸೇರಿ ಅದಾವುದೋ ವಿಚಾರಗೋಷ್ಠಿ ಆಯೋಜಿಸಿದ್ದಾರೆ.

ಲೋಹಿಯಾವಾದ, ಲಂಕೇಶ್ ಹೆಸರಲ್ಲಿ ಬೋರು ಹೊಡೆಸುವ ರವಿಕೃಷ್ಣಾ "ರೆಡ್ಡಿ", ಕ್ಯಾಲಿಫೋರ್ನಿಯಾದಲ್ಲಿ ಕನ್ನಡ ಕೂಟದ ಅಧ್ಯಕ್ಷನಾಗಿದ್ದಾಗ ಕನ್ನಡ ಬಳಗವನ್ನು ಜಾತಿಯ ಆಧಾರದಲ್ಲಿ ವಿಭಜಿಸಿದನ್ನು ಅಲ್ಲಿಯ ಕನ್ನಡಿಗರು ಇಂದಿಗೂ ನೆನಪಿಟ್ಟುಕೊಂಡಿದ್ದಾರೆಯೆಂದು ಅಲ್ಲಿಂದ ಬಂದ ಓರ್ವ ಮಿತ್ರ ಹೇಳುತ್ತಿದ್ದ.

ಅಲ್ಲಾ ಭಟ್ಟರು ಅನಂತಕುಮಾರ್ ಭಟ್ಟಂಗಿ, ಪಕ್ಷಪಾತಿಗಳೆಂದೆಲ್ಲಾ ಹೇಳುವ ರೆಡ್ಡಿ, ತನ್ನ "ವಿಕ್ರಾಂತ ಕರ್ನಾಟಕ"ದ ಡಮ್ಮಿ ಸಂಪಾದಕನಾದ ತನ್ನ ಅಣ್ಣ ಜನತಾದಳದ ಸಕ್ರಿಯ ಕಾರ್ಯಕರ್ತ / ಪದಾಧಿಕಾರಿಯೆಂಬುದನ್ನು ಬಚ್ಚಿಡುವುದರ ರಹಸ್ಯವೇನು?

ಇನ್ನು ಲೋಕಕ್ಕೆಲ್ಲಾ ವಿಚಾರ ಹೇಳುವ ರವಿಕೃಷ್ಣಾ ರೆಡ್ಡಿಯ ಅಸಲು ಏನೆಂಬುದು "ವಿಕ್ರಾಂತ ಕರ್ನಾಟಕ"ವನ್ನು ನೋಡಿದರೆಯೇ ತಿಳಿಯುತ್ತದೆ. ಬೇರೆಯವರಿಗೆ ಉಚಿತ ಉಪದೇಶವನ್ನು ಪುಂಖಾನಪುಂಖವಾಗಿ ನೀಡುವ ಈ ರವಿಕೃಷ್ಣಾ ರೆಡ್ಡಿ ಮೊದಲು ತನ್ನ ಪತ್ರಿಕೆಯವನ್ನು ಪ್ರತಿ ವಾರ ಸರಿಯಾಗಿ ಹೊರತರಲಿ. ಇನ್ನೂ "ವಿಕ್ರಾಂತ ಕರ್ನಾಟಕ"ದ ಬಗ್ಗೆ, ಅದರ "ಗೌರವ ಸಂಪಾದಕ" "ರಾಮಕೃಷ್ಣ ಹೆಗಡೆ ಸರಕಾರ ಬಂದದ್ದೇ ನನ್ನಿಂದ" ರವೀಂದ್ರ ರೇಷ್ಮೆಯೆಂಬ ಇನ್ನೊಂದು ಲಂಕೇಶ್ ಪಳೆಯುಳಿಕೆ ಬಗ್ಗೆ ಬರೆಯುವುದು ಬಹಳಷ್ಟಿದೆ - ಇನ್ನೊಂದು ಬ್ಲಾಗ್ ಪೋಸ್ಟ್ ನಿರೀಕ್ಷಿಸಿ. ಸದ್ಯಕ್ಕೆ ಕಾಫಿ ಕುಡಿಯುತ್ತಾ ಈ ಇಬ್ಬರ ಜಗಳ ಎಂಜಾಯ್ ಮಾಡಿ.

ಅತ್ತ ಚುನಾವಣೆಯಲ್ಲೂ ಠೇವಣಿ ಉಳಿಸಿಕೊಳ್ಳಲಾಗದ ಈ ರೆಡ್ಡಿ ಇತ್ತ ಸರಿಯಾಗಿ ಪ್ರತಿವಾರ ಪತ್ರಿಕೆ ಹೊರತರಲಾರದೆ ಮಾಧ್ಯಮ ಲೋಕದಲ್ಲೂ ಫ್ಲಾಪ್. ಒಟ್ಟಾರೆ ರೆಡ್ಡಿಯಂತಹ ಜೋಕರುಗಳೂ ನಮಗೆ ಪುಕ್ಕಟೆ ಮನರಂಜನೆ ನೀಡುತ್ತಿದ್ದಾರೆಂಬುದು ನಿಜ!

ರವಿ ರೆಡ್ಡಿಯ ಕಭೀ ಹಾಂ ಕಭೀ ಹಾಂ ವಾರಪತ್ರಿಕೆಯ ಬೆರಳೆಣಿಕೆಯ ಓದುಗರೆದುರು, ಪ್ರತಿನಿತ್ಯ ಲಕ್ಷಗಟ್ಟಳೆ ಓದುಗರನ್ನು ಹೊಂದಿರುವ ವಿಶ್ವೇಶ್ವರ ಭಟ್ಟರು ಈ ರೌಂಡಿನಲ್ಲಿ "ವಿಜಯ" ಸಾಧಿಸಿದ್ದಾರೆಯೆಂದು ಹೇಳೋಣವೇ?