Showing posts with label Bangalore Journalists. Show all posts
Showing posts with label Bangalore Journalists. Show all posts

Monday, November 2, 2009

ರೆಡ್ಡಿಗಳ ಕಪಿ ಮುಷ್ಠಿಯಿಂದ ಕರ್ನಾಟಕಕ್ಕೆ ಮುಕ್ತಿಯೆಂದು?ಮಾಧ್ಯಮಗಳಲ್ಲಿ ನಡೆಯುತ್ತಿರುವ ಭಿನ್ನಮತ - ರೆಡ್ಡಿಗಳ ಮುಷ್ಠಿಯಲ್ಲಿ ಕರ್ನಾಟಕದ ಮಾಧ್ಯಮ ಮಿತ್ರರು

ರಾಜಶೇಖರ ರೆಡ್ಡಿಯ ಹೆಲಿಕಾಪ್ಟರ್ ಪರ್ವತಕ್ಕಪ್ಪಳಿಸಿ ಬಾಡಿ ಸಿಗುವುದರೊಳಗೆ ಜಗನ್ ತನ್ನ ಟಿ.ವಿ. ಮತ್ತು ದಿನಪತ್ರಿಕೆಯ ಮೂಲಕ ಆಂಧ್ರ ಮತ್ತು ದೇಶದಾದ್ಯಂತ create ಮಾಡಿದ emotion ಭಾರತದ ಮಾಧ್ಯಮಗಳ ಸುದ್ದಿ coverage ಮಟ್ಟಿಗೆ ಒಂದು turning point. ದಿಢೀರನೆ ಎಲ್ಲಿಂದಲೋ ಬಂದ ನೂರಾರು ಜನರು ಜಿಲ್ಲೆ ಜಿಲ್ಲೆಗಳ ಕಾಂಗ್ರೆಸ್ ಕಚೇರಿ ಮುಂದೆ ಅರ್ತನಾದಿಸಿದ್ದೇನು, ಆತ್ಮಹತ್ಯೆ ಮಾಡಿಕೊಳ್ಳುತ್ತೇವೆಯೆಂದು ಬೊಬ್ಬೆ ಹಾಕಿದ್ದೇನು, ಜಗನ್ ಬಿಟ್ಟರೆ ಇನ್ನು ರಾಜ್ಯಕ್ಕೆ ಉಳಿಗಾಲವಿಲ್ಲವೆಂದು ಟಿ.ವಿ.ಯಲ್ಲಿ ಪ್ರದರ್ಶಿಸಿದ್ದೇನು!

ಇದೇ ಮಾಧ್ಯಮ strategyಯನ್ನು ಬಳ್ಳಾರಿಯ ಮಣ್ಣು ಮಾರಿ ಬದುಕುತ್ತಿರುವ ರೆಡ್ಡಿ ಬ್ರದರ್ಸ್ ಈಗ ಕರ್ನಾಟಕದಲ್ಲಿ ಭಿನ್ನಮತ ರಾಜಕಾರಣಕ್ಕೆ ಉಪಯೋಗಿಸುತ್ತಿದ್ದಾರೆ. ಹೇಗೂ ಜಗನ್ ರೆಡ್ಡಿಯ ಖಾಸಾ ದೋಸ್ತಿಗಳು ನೋಡಿ?

ಈ ರೆಡ್ಡಿಗಳು ಬಿಸಾಕುತ್ತಿರುವ ಬ್ರೆಡ್ ತಿನ್ನಲ್ಲು ನಾಮುಂದೆ ತಾಮುಂದೆಯೆಂದು ಜೊಲ್ಲು ಸುರಿಸಿ ತಿನ್ನುತ್ತಿರುವವರು MLAಗಳು ಮಾತ್ರವಲ್ಲ, ಮಾಧ್ಯಮ ಮಿತ್ರರೂ ಎಂದು ಹೇಳಲು ವಿಷಾದವಾಗುತ್ತದೆ.

ಇಡೀ ಬಳ್ಳಾರಿಯನ್ನು ಗಣಿಗಾರಿಕೆ ನೆಪದಲ್ಲಿ ಅಗೆದು ಮಾರಿ ತಮ್ಮ ಮನೆ, ಹೆಲಿಕಾಪ್ಟರ್, MLAಗಳನ್ನು ಇಟ್ಟುಕೊಂಡಿರುವ ಈ ಬಳ್ಳಾರಿ ರೆಡ್ಡಿಗಳು ಬಳ್ಳಾರಿಯ ಪತ್ರಕರ್ತ ಮಿತ್ರರಿಗೆ ಪ್ರತಿ ವರ್ಷ laptop, ಕೆಮರಾಗಳನ್ನು ಭಿಕ್ಷೆಯಾಗಿ ನೀಡುತ್ತಾ ಇಟ್ಟುಕೊಂಡಿರುವುದು ಎಲ್ಲರಿಗೂ ತಿಳಿದಿದೆ. ಆದರೆ ರಾಜ್ಯ ಮಟ್ಟದಲ್ಲೂ ಈ ರೆಡ್ಡಿಗಳು ಪ್ರಾಯಶ: ಎಲ್ಲಾ ಪ್ರಮುಖ ಮಾಧ್ಯಮ ಮಿತ್ರರನ್ನು "ಸಾಕಿಕೊಂಡಿರುವುದು" ಇತ್ತೀಚಿನ ಭಿನ್ನಮತ ಸ್ಪೋಟದಲ್ಲಿ ಸ್ಪಷ್ಟವಾಗಿದೆ.

ಇಲ್ಲದಿದ್ದರೆ ಯಾವ ಮಾಧ್ಯಮ ಮಿತ್ರರೂ ಈ ರೆಡ್ಡಿಗಳಿಗೆ ಕೆಳಗಿನ ಪ್ರಶ್ನೆಗಳನ್ನೇಕೆ ಕೇಳುತ್ತಿಲ್ಲ:
  • ಇಡೀ ರಾಜ್ಯವೇ ನೆರೆಯಲ್ಲಿ ಕೊಚ್ಚಿ ಹೋಗಿರುವಾಗ ಭಿನ್ನಮತದ ಕಹಳೆ ಊದುವುದು ಯಾವ ಜನಪರ ಕಾರ್ಯ?
  • ತಾವು ಮಂತ್ರಿಗಳಾಗಿ ೧೬ ತಿಂಗಳಾಯಿತು - ತಮ್ಮ ಸಾಧನೆ ಏನು?
  • ಶ್ರೀರಾಮುಲು - ಈ ಮಹಾನುಭವ ಆರೋಗ್ಯ ಖಾತೆಯಂತಹ ಪ್ರಮುಖ ಖಾತೆ ಇಟ್ಟುಕೊಂಡಿದ್ದರೂ ಹಂದಿ ಜ್ವರದಂತಹ ಹೆಮ್ಮಾರಿ ಬಂದಿರುವಾಗ ಅಲ್ಲೇ ಬಳ್ಳಾರಿ ಹೈದರಾಬಾದಿಗೆ ತನ್ನ ಮೇಕಪ್ಪಿಗಾಗಿ ಹಾರಾಡುತ್ತಿದ್ದ ವಿನ: ವಿಧಾನಮಂಡಳದಲ್ಲಿ ಕಂಡು ಬಂದದ್ದು ಬೆರಳೆಣಿಕೆಯ ದಿನಗಳಲ್ಲಷ್ಟೇ. ಇತ್ತೀಚೆಗೆ ರಾಜ್ಯದ ಸರಕಾರೀ ವೈದ್ಯರು ರಾಜೀನಾಮೆ ಬೆದರಿಕೆ ಹಾಕಿದ್ದಾಗ ಕಾಣೆಯಾಗಿದ್ದ ಈ ಆಸಾಮಿಯ ಕೆಲಸವನ್ನು ಕಡೆಗೆ ಅದೇ ಯಡ್ಡಿ, ರಾ.ಗೌಡ, ಆಚಾರ್ಯರಂತವರು ಮಾಡಿ ಬಿಕ್ಕಟ್ಟು ಪರಿಹಾರ ಮಾಡಿದರು. ಜನರು ನೆರೆಯಲ್ಲಿ ಮುಳುಗಿರುವಾಗ ಶ್ರೀರಾಮುಲು ತನ್ನ ಮಿತ್ರರೊಂದಿಗೆ ಹೆಲಿಕಾಪ್ಟರಿನಲ್ಲಿ ಹಾರಾಡುತ್ತಾ ಅತ್ತ ಸಿನೆಮಾ ನೋಡುತ್ತಿದ್ದದ್ದು ಸರಿಯೇ?
  • ಕರುಣಾಕರ ರೆಡ್ಡಿ - ಕಂದಾಯದಂತಹ ಅತಿ ಪ್ರಮುಖ ಖಾತೆಯನ್ನು ಹೊಂದಿರುವ ಈ ಆಸಾಮಿ ರಾಜ್ಯವಿಡೀ ನೆರೆ ನೀರಿನಲ್ಲಿ ಮುಳುಗಿರುವಾಗ ಕೆಲ ಫೊಟೋಗಳಲ್ಲಿ ಮಿಂಚಿದರೇ (ಅದೂ ತನ್ನ ಮನೆಯಿರುವ ಬಳ್ಳಾರಿಯಲ್ಲಿ) ವಿನ: ತಾನು ರಾಜ್ಯದ ಕಂದಾಯ ಮಂತ್ರಿಯೆಂಬುದನ್ನು ಮರೆತು ಬಳ್ಳಾರಿಯಲ್ಲೇ ವಾರಗಟ್ಟಳೆ ಕೂತು ತನ್ನ ಗಣಿ ವ್ಯವಹಾರವನ್ನು ನೋಡಿ ಕೊಳ್ಳುತ್ತಿರುವುದು ಸರಿಯೇ?
  • ಇನ್ನು ಜನಾರ್ಧನ ರೆಡ್ಡಿ ಒಮ್ಮೆ ತಮ್ಮನ್ನು ಕುಮಾರಸ್ವಾಮಿ, ಚೆನ್ನಿಗಪ್ಪರ ವೀಡಿಯೋ ಇದೆ ಎಂದೆಲ್ಲಾ fool ಮಾಡಿದ್ದನ್ನು ಪತ್ರಕರ್ತ ಮಿತ್ರರು ಮರೆತಂತಿದೆ. ಇವತ್ತು ಗಣಿ ಲಂಚದ ವೀಡಿಯೋ ತೋರಿಸುತ್ತೇನೆ, ನಾಳೆ ತೋರಿಸುತ್ತೇನೆ ಎಂದೆಲ್ಲಾ ಹೇಳಿ ಬೆಂಗಳೂರು ಬಳ್ಳಾರಿ ನಡುವೆ ಪತ್ರಕರ್ತರನ್ನು ಓಡಾಡಿಸಿದ ಈ ಆಸಾಮಿ ಬರೀ ಟೊಳ್ಳುವೆಂದು ಜನರಿಗೆ ಯಾವಾಗಲೋ ಅರ್ಥವಾಗಿದೆ.
  • ಇನ್ನು ಜಗದೀಶ ಶೆಟ್ಟರ್ ಎಂಬ ಹುಬ್ಬಳ್ಳಿಯಾಂವನ ಬಗ್ಗೆಯೇನು ಹೇಳಬೇಕು? ಕುಮಾರಸ್ವಾಮಿಯ ೧೮ ತಿಂಗಳ ಸರಕಾರದಲ್ಲಿ ಕಂದಾಯ ಮಂತ್ರಿಯಾಗಿ ಅವರ ಸಾಧನೆಯೇನು ಎಂದು ಕೇಳಬೇಕಾಗುತ್ತದೆ. ಎಷ್ಟೇ ನೆನೆದರೂ ಈ ಶೆಟ್ಟರ್ ಕಂದಾಯ ಮಂತ್ರಿಯಾಗಿ ಏನು ಕಡೆದು ಹಾಕಿದರು ಎಂದು ನೆನಪಾಗುತ್ತಿಲ್ಲ. ಒಂದು ಮೂಲದ ಪ್ರಕಾರ ಆ 16 ತಿಂಗಳಲ್ಲಿ ಶೆಟ್ಟರ್ ಹಾಗೂ ಅವರ ಸಹೋದರ "ದುಡಿದು ಹಾಕಿದಷ್ಟು" ಕರ್ನಾಟಕದ ಯಾವ ಕಂದಾಯ ಮಂತ್ರಿಯೂ ದುಡಿದಿಲ್ಲವಂತೆ. ಅದೇ ಸುದ್ದಿ ಕೇಂದ್ರದ ಬಿಜೆಪಿ ನಾಯಕರುಗಳಿಗೆ ತಲುಪಿ ಅವರನ್ನು ಮುಂದಿನ ಸರಕಾರದಲ್ಲಿ ಮಂತ್ರಿ ಮಾಡದಿರುವ ತೀರ್ಮಾನ ಮಾಡಿದ್ದಾರೆಂದು ಕಳೆದ ವರ್ಷ ಕೇಳಿಬಂದಿತ್ತು. ಸದಾ ನಿದ್ದೆಯಿಂದ ಹೊರಬರದಿರುವ ಶೆಟ್ಟರ್ ಮುಖ್ಯಮಂತ್ರಿ ಕ್ಯಾಂಡಿಡೇಟ್ ಎಂದು ಯಾವ ಬಿಜೆಪಿ ಕಾರ್ಯಕರ್ತರೂ ನಂಬುವುದಿಲ್ಲ - ಕೇವಲ ರೆಡ್ಡಿಗಳಿಂದ ಕೃತಾರ್ಥರಾದ ಮಾಧ್ಯಮ ಮಂದಿಗಳಷ್ಟೇ ಅದನ್ನು ಹೇಳುತ್ತಿರುತ್ತಾರಷ್ಟೇ. ಇನ್ನು ರೆಡ್ಡಿಗಳ ಬೆಂಬಲದಿಂದ ಮುಖ್ಯಮಂತ್ರಿಯಾದರೂ ಆ ರೆಡ್ದಿಗಳ ಗಣಿ ಮಣ್ಣಿನ ಧೂಳು ತೆಗೆಯಲು ಕಾರ್ಪೆಟ್ ಆಗಬೇಕಷ್ಟೇ ಎಂದು ತಿಳಿಯದಷ್ಟು ಶೆಟ್ಟರ್ ದಡ್ಡರೇನಲ್ಲ.

ಈ ರೆಡ್ಡಿಗಳು ರಾಜ್ಯದ ಭೂಮಿಯನ್ನು ಲೂಟಿ ಮಾಡಿ ರಾಜ್ಯದ ರಸ್ತೆಗಳನ್ನು, ಬಂದರುಗಳನ್ನು ತಿಂದು ಕುಡಿದಾಗಿದೆ. ವಿಧಾನಸೌಧವಿರುವ ಜಾಗದಲ್ಲಿ ಖನಿಜ ಕಂಡುಬಂದರೆ ಅದನ್ನು ಅಗೆದು ಚೀನಾಕ್ಕೆ ಮಾರಲು ಹೇಸದ ಜನರು ಇವರು. ವರ್ಷಕ್ಕೊಮ್ಮೆ ಸಾಮೂಹಿಕ ವಿವಾಹ, ಸುಷ್ಮಾ ಸ್ವರಾಜ್ ಜೊತೆ ವರಮಹಾಲಕ್ಷ್ಮಿ ಪೂಜೆ ಮಾಡಿದ ಕೂಡಲೇ ರಾಜ್ಯದಲ್ಲಿ ತಮ್ಮ ಮೀರುವ ನಾಯಕರು ಇಲ್ಲ, ತಮ್ಮ ಗುರಿ ಮುಖ್ಯಮಂತ್ರಿ ಖುರ್ಚಿಯೆಂದೆಲ್ಲಾ ಹೇಳಿಸಿಕೊಳ್ಳುವ ಈ ರೆಡ್ಡಿಗಳು ಕರ್ನಾಟಕದ ಜನತೆಯ ತಾಳ್ಮೆ ಪರಿಶೀಲಿಸುತ್ತಿದ್ದಾರೆ.

ಇಷ್ಟೆಲ್ಲಾ ತಮ್ಮ ಕಣ್ಣ ಮುಂದೆಯಿದ್ದರೂ ರೆಡ್ಡಿಗಳು ಹೇಳಿದ್ದೇ ಪಂಚಾಮೃತವೆಂದು ಬರೆಯುವ ದೊಡ್ಡ ಪತ್ರಕರ್ತರ ಗುಂಪೇ ಇದೆ. ಇದೇ ಗುಂಪಿಗೆ ೨೬ MLAಗಳು ೮೦ MLAಗಳಂತೆ ಕಾಣುತ್ತಾರೆ. ಪದೇ ಪದೇ ಯಡ್ಯೂರಪ್ಪನವರ ಬಗ್ಗೆ ಬರೆದದ್ದನ್ನೇ ಬೇರೆ ಬೇರೆ ರೀತಿಯಲ್ಲಿ ಬರೆದು (ಯಡ್ಯೂರಪ್ಪ ಸಿಡುಕ, ಸಹ ಮಂತ್ರಿಗಳ ಜೊತೆ ನಗುವುದಿಲ್ಲ, ಶೋಭಾ show ಇತ್ಯಾದಿ) ತಮ್ಮ ಕಾಲಂಗಳನ್ನು ತುಂಬಿಸಿಕೊಳ್ಳುತ್ತಿದ್ದಾರೆ. ಅವರು ಯಡ್ಯೂರಪ್ಪನವರ ಬಗ್ಗೆ ಬರೆಯುವುದೆಲ್ಲಾ ನಿಜವಿರಬಹುದು, ಆದರೆ ಆ ವಿಷಯಗಳನ್ನೆತ್ತಲು ಇದು ಸರಿಯಾದ ಸಮಯವೇ?

ಅತ್ತ ಜಗನ್ ತನ್ನ ತಂದೆ ಹೆಲಿಕಾಪ್ಟರ್ ದುರಂತದಲ್ಲಿ ಮಡಿದು ಬಾಡಿ ಸಿಗುವ ಮೊಡಲೇ ಟಿವಿ ಪತ್ರಿಕೆಗಳಲ್ಲಿ ತನ್ನನ್ನು ಮುಂದಿನ ಮುಖ್ಯಮಂತ್ರಿಯಾಗಿ project ಮಾಡಿಕೊಂಡು ಈಗ ಎಲ್ಲಿದ್ದಾರೆಯೆಂಬುದನ್ನು ಹುಡುಕುವ ಸ್ಥಿತಿ ಬಂದಿದೆ. ಯಾವ ಮಾಧ್ಯಮಗಳು ಪತ್ರಕರ್ತರು ಜಗನ್ ರೆಡ್ಡಿಯನ್ನು ಆಂಧ್ರದ ಮುಖ್ಯಮಂತ್ರಿಯೆಂದು project ಮಾಡಿದರೋ ಅದೇ ಮಾಧ್ಯಮಗಳು ಈಗ ಜಗನ್ ರೆಡ್ಡಿಯನ್ನು ಮೂಸಿ ನೋಡುತ್ತಿಲ್ಲ.

ಮಾಧ್ಯಮಗಳ ಮೂಲಕವೇ ರಾಜಕೀಯ ನಡೆಸಬಹುದು, ಪತ್ರಕರ್ತರನ್ನು ತಮ್ಮ ಎಜೆಂಡಾಗೆ ತಕ್ಕಂತೆ ಬಳಸಿಕೊಳ್ಳಬಹುದು, ಜನರನ್ನು ವರಿಷ್ಠರನ್ನು ತಮ್ಮ ದಾರಿಗೆ ತರಬಹುದು ಎಂದು ರೆಡ್ಡಿಗಳು ಭಾವಿಸಿದ್ದರೆ ಅತ್ತ ಆಂಧ್ರದಲ್ಲಿ ಜಗನ್ ರೆಡ್ಡಿಗಾದ ಪರಿಸ್ಥಿತಿಯನ್ನು ನೋಡಿಯಾದರೂ ಕಲಿಯುವುದೊಳಿತು.

Monday, August 3, 2009

ಛೇ! ಉದಯವಾಣಿ ಈ ಮಟ್ಟಕ್ಕೆ ಇಳಿಯಬಾರದಿತ್ತು!





೭೭೦ ಕೋಟಿಗಳು ಮಾತನಾಡುತ್ತಿವೆಯೇ?
ಛೇ! ಉದಯವಾಣಿ ಈ ಮಟ್ಟಕ್ಕೆ ಇಳಿಯಬಾರದಿತ್ತು!


[UPDATE] Yet another nausceating report today in Udayavani.





ಕಳೆದ ಮೂರು ದಿನಗಳಿಂದ "ಉದಯವಾಣಿ" (ಬೆಂಗಳೂರು ಆವೃತ್ತಿ) ಯಲ್ಲಿ ಗೋವಿಂದರಾಜ ನಗರದ ಕಾಂಗ್ರೆಸ್ ಅಭ್ಯರ್ಥಿ ಪ್ರಿಯಕೃಷ್ಣಾರನ್ನು ಹಿಗ್ಗಾಮುಗ್ಗಾ ಹಾಡು ಹೊಗಳಿ ಯಾವುದೇ ಇನ್ಫೋಮರ್ಷಿಯಲ್ಲಿಗೆ ಕಮ್ಮಿಯಿರದಂತೆ ಇರುವ ಸುದ್ದಿಗಳು ಪ್ರಕಟವಾಗುತ್ತಿವೆ.

ಪ್ರಿಯಕೃಷ್ಣಾರನ್ನು ಹೊಗಳುವ ಭರದಲ್ಲಿ ಉದಯವಾಣಿ ಉಪಯೋಗಿಸಿದ ಪದ ಪುಂಜಗಳನ್ನು ನೋಡಿದಾಗ ಈ ಸುದ್ದಿಗಳು ಪ್ರಾಯಷ: ಜಾಹಿರಾತುಗಳಿರಬೇಕೆಂದು ಭಾವಿಸಿದ್ದೆ - ಆದರೆ ಎಲ್ಲೂ ಜಾಹೀರಾತುವೆಂಬ ಡಿಸ್ಕ್ಲೇಮರುಗಳಾಗಲಿ, ಚಿಕ್ಕ ಅಕ್ಷರಗಳಲ್ಲಿ "ಜಾಹೀರಾತು" ಎಂಬ ಅಕ್ಷರಗಳನ್ನು ಕಾಣೆ!



ಈ "ಸುದ್ದಿ"ಗಳು ಎರಡು ದಿನ ಮೊದಲ ಪುಟದಲ್ಲೇ ಬಂದಿವೆಯೆಂಬುದು ಗಮನಾರ್ಹ.



ಚುನಾವಣಾ ದಿನ ಸಮೀಪಿಸಿದಂತೆ ಪತ್ರಿಕೆಗಳು ಕ್ಷೇತ್ರದ ಸಮೀಕ್ಷೆ, ಅಭ್ಯರ್ಥಿಗಳ ಸಂದರ್ಶನ, ಮತದಾರರ ಸಂದರ್ಶನ ಮಾಡಿ ಯಾವುದಾದರು ಅಲೆಯಿದೆಯೋ ಅಥವಾ ಟ್ರೆಂಡಿದೆಯೋವೆಂದು ಬರೆಯುವುದು ಸಹಜ. ಆದರೆ ನಾಮಪತ್ರ ಸಲ್ಲಿಸಿದ ಮರುಗಳಿಗೆಯಲ್ಲೇ, ಚುನಾವಣಾ ಪ್ರಚಾರ ಕಾವೇರದ ಸಮಯದಲ್ಲಿ, ಕಳೆದ ಮೂರು ದಿನಗಳಿಂದ ಮೇಲಿಂದ ಮೇಲೆ ಪ್ರಿಯಕೃಷ್ಣರನ್ನು ಹೊಗಳಿ ಅಟ್ಟಕ್ಕೇರಿಸುವ ವರದಿಗಳು ಬರುತ್ತಿರುವುದು ಸೋಜಿಗದ ಸಂಗತಿ.

ವರದಿಗಳಲ್ಲಿನ ಕೆಲವು ವಾಕ್ಯಗಳನ್ನು ಓದಿದಾಗ ಭಲೇ ಭಲೇ ವರದಿಗಾರವೆನ್ನುವಂತಿದೆ - ಗೋವಿಂದರಾಜ ನಗರದಲ್ಲಿ ಸುಮಾರು ೨.೪ ಲಕ್ಷ ಮತದಾರರಿದ್ದಾರೆ - ಅವರನ್ನೆಲ್ಲಾ "ಉದಯವಾಣಿ"ಯ ವರದಿಗಾರರು ಪರ್ಸನಲ್ಲಾಗಿ ಮೀಟಾಗಿ ಅಭಿಪ್ರಾಯ ಸಂಗ್ರಹಿಸಿದಂತಿದೆ!

ಬನ್ನಿ ನೋಡಿ ಉದಯವಾಣಿಯ ಕೆಲ "ಸುದ್ದಿ" ಸ್ಯಾಂಪಲುಗಳನ್ನು:


ಕ್ಷೇತ್ರದ ಎಲ್ಲೆಡೆ ಪ್ರಿಯಕೃಷ್ಣ ಅವರಿಗೆ ಅದ್ದೂರಿ ಸ್ವಾಗತ ದೊರೆಯುತ್ತಿದ್ದು ಮತದಾರರು ಸ್ವಯಂ
ಸ್ಫೂರ್ತಿಯಿಂದ ಸ್ವಾಗತಕೋರಿ ಆಶೀರ್ವಾದ ಮಾಡುತ್ತಿದ್ದಾರೆ.



ಗೋವಿಂದರಾಜ ನಗರದಲ್ಲಿ ಪ್ರಿಯಕೃಷ್ಣ ಅವರನ್ನು ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಘೋಷಣೆ ಮಾಡಿದ ಕ್ಷಣದಿಂದಲೇ ಸಂಭ್ರಮಿಸಿದ್ದ ಯುವಕರಂತೂ ತಾವೇ ಚುನಾವಣೆಗೆ ಸ್ಪರ್ಧಿಸಿದಂತೆ ಸೈನಿಕರಂತೆ ಹಗಲಿರುಳು ಪ್ರಿಯಕೃಷ್ಣ ಅವರ ಪರವಾಗಿ ನಿರಂತರ ಪ್ರಚಾರದಲ್ಲಿ ತೊಡಗಿದ್ದಾರೆ. ಯುವಕ-ಯುವತಿಯರು ಮತದಾರರ ಮನೆಬಾಗಿಲಿಗೆ ಹೋಗಿ ಮತಯಾಚನೆ ಮಾಡುತ್ತಿದ್ದಾರೆ.



ಕ್ಷೇತ್ರದ ಅಭಿವೃದ್ದಿಗಾಗಿ ಪಣ ತೊಟ್ಟಿರುವ ವಿದ್ಯಾವಂತ ಯುವ ತರುಣ ಪ್ರಿಯಕೃಷ್ಣ ಅವರ ಜನಪರ ಕಾಳಜಿ ಬಗ್ಗೆ ಮತದಾರರು ಮೆಚ್ಚುಗೆ ಸೂಚಿಸುತ್ತಿದ್ದಾರೆ.

ಕಾಂಗ್ರೆಸ್ ಕಾರ್ಯಕರ್ತರು ಸೈನಿಕರ ರೀತಿಯಲ್ಲಿ ತಾವೇ ಚುನಾವಣೆಗೆ ಸ್ಪರ್ದಿಸಿರುವಂತೆ ನಿರಂತರವಾಗಿ ಮತದಾರರ ಮನೆಬಾಗಿಲಿಗೆ ತಲುಪುತ್ತಿದ್ದಾರೆ.



(ಅಂದ ಹಾಗೆ ಹೊಗಳುವ ಭರದಲ್ಲಿ ಪದೇ ಪದೇ ಸೈನಿಕರನ್ನು ಉಲ್ಲೇಖ ಮಾಡಿದ್ದು ನೋಡಿದರೆ ವರದಿಗಾರ ಮಾಜಿ ಸೈನಿಕ ಅಥವಾ ಸೈನ್ಯದ backgroundನವರಿರಬೇಕೇನೋ!?)

ಕಳೆದ ಚುನಾವಣೆಯಲ್ಲಿ ಆಂಧ್ರಪ್ರದೇಶದಲ್ಲಿ ಮಾಧ್ಯಮಗಳು, ಪತ್ರಕರ್ತರು ಸಾರಾಸಗಟಾಗಿ ಪಕ್ಷಗಳಿಗೆ ಮಾರಿಕೊಂಡಿದ್ದರೆಂದು ಕೇಳಿದ್ದೆ, ನಮ್ಮಲ್ಲೂ ಸಂಜೆಪತ್ರಿಕೆಗಳಿಗೆ, ಒಂದು ವಾರ ಹುಟ್ಟಿ ಮರುವಾರ ಅದೃಶ್ಯವಾಗುವ ಪೀತ ಪತ್ರಿಕೆಗಳಿಗೆ ಇಂತಹ pay for news culture ಹೊಸದೇನಲ್ಲ.


ಆದರೆ ಪ್ರಾಯಷ: "ಉದಯವಾಣಿ"ಯಂತಹ Main Stream ಪತ್ರಿಕೆಯೊಂದು ಹೀಗೆ ಮಾಡುತ್ತಿರುವುದು ಕರ್ನಾಟಕ ಪತ್ರಿಕೋದ್ಯಮದಲ್ಲೊಂದು ಪ್ರಥಮವೇನೋ? ಟಿ.ಎ.ಪೈ.ಯವರು ಉಡುಪಿ ಲೋಕಸಭೆ ಚುನಾವಣೆಗೆ ನಿಂತಾಗ "ಉದಯವಾಣಿ" ಅವರ ಚುನಾವಣಾ pamphletನಂತೆ ವರದಿ ಮಾಡಿತ್ತು ಎಂದು ಮನೆ ಹಿರಿಯರು ಹೇಳುತ್ತಿದ್ದರು - ಆದರೆ ಅಲ್ಲಿ ತನ್ನ ಧಣಿಯೇ ಚುನಾವಣೆಗೆ ನಿಂತಾಗ ಅವರ ಬೆಂಬಲಕ್ಕೆ ಪತ್ರಿಕೆ ನಿಂತದ್ದು ಸಹಜವೆಂದು ಕ್ಷಮಿಸಬಹುದು - ಆದರೆ "ಉದಯವಾಣಿ" ಬೆಂಗಳೂರು ಆವೃತ್ತಿಗೆ ಪ್ರಿಯಕೃಷ್ಣಾರನ್ನು ಹೀಗೆ ಯದ್ವಾತದ್ವಾ ಬೆಂಬಲಿಸುವ ಯಾವ ಅನಿವಾರ್ಯತೆಯಿದೆಯೆಂದು ಕೇಳ ಬೇಕಾಗುತ್ತದೆ.

ಲೇಯೌಟ್ ಕೃಷ್ಣಪ್ಪ ಮತ್ತು ಅವರ ಮಗ ನಿಜಕ್ಕೂ ಜನಾನುರಾಗಿಗಳಿರಬಹುದು, ಜನಪ್ರಿಯರಿರಬಹುದು. ಆದರೆ ಅವರು ನೂರಾರು ಕೋಟಿಗಳ ಒಡೆಯರೂ ಎಂಬುದನ್ನು ಅಲ್ಲಗೆಳೆಯುವಂತಿಲ್ಲವಲ್ಲ? ಪ್ರಿಯಕೃಷ್ಣ ಚುನಾವಣಾ ಆಯೋಗಕ್ಕೆ ಸಲ್ಲಿಸಿರುವ ಆಸ್ತಿ ವಿವರ ಪ್ರಕಾರ ಈ ೨೬ ವರುಷದ ಬ್ರಹ್ಮಾಚಾರಿ ೭೭೦ ಕೋಟಿಯ ಒಡೆಯ.



ಗೋವಿಂದರಾಜ ನಗರದಿಂದ ಸ್ಪರ್ಧಿಸಿರುವ ಮಂತ್ರಿ ಸೋಮಣ್ಣನವರೂ ಕೋಟ್ಯಾಧಿಪತಿಯೇ ಮತ್ತು "ಪತ್ರಕರ್ತರನ್ನು ಸಾಕಿಕೊಂಡವರೇ" - ಏನೇ ರಿಬ್ಬನ್ ಕಟ್ ಮಾಡುವ ಸಂಧರ್ಭವಿರಲಿ ಪತ್ರಕರ್ತ ಫೊಟೋಗ್ರಾಫರ್ ಪಡೆಗಳನ್ನು ಕರೆದುಕೊಂಡು ಹೋಗುವುದು ಸೋಮಣ್ಣನವರ ಸ್ಟೈಲ್. ಆದರೆ ಇತ್ತೀಚೆಗೆ ಬೆಂಗಳೂರು ನಗರ ಪಾಲಿಕೆಯ ಇಂಜಿನಿಯರೊಬ್ಬರಿಗೆ ಆಸ್ಪತ್ರೆ ಸೇರುವಂತೆ ಕಪಾಳ ಮೋಕ್ಷ ಮಾಡಿ ಸುದ್ದಿಯಾದ ನಂತರ ಸುದ್ದಿಮನೆಗಳಲ್ಲಿ ಸೋಮಣ್ಣ persona non grata ಆಗಿದ್ದಾರೆ.



ಆದರೂ ಇಂತಹ ಕೋಟ್ಯಾಧಿಪತಿಗಳ ನಡುವಿನ ಕದನ ವರದಿ ಮಾಡಲು ತಾಮುಂದು ನಾಮುಂದು ಎಂದು ಸುದ್ದಿಮನೆಗಳಲ್ಲಿ ಸ್ಪರ್ಧೆ ನಡೆದಿರಬಹುದೇನೋ?

ಏನೇ ಇರಲಿ, "ಉದಯವಾಣಿ"ಯಂತಹ ಪತ್ರಿಕೆ, ಅದರಲ್ಲೂ ಪತ್ರಿಕೋದ್ಯಮದಲ್ಲಿ ಪಳಗಿದ, ಒಳ್ಳೇ ಹೆಸರಿರುವ ಅದರ ಬೆಂಗಳೂರಿನ ಸಂಪಾದಕ ಮಂಡಳಿ ಯಾಕೆ ಪತ್ರಿಕಾ ಧರ್ಮವನ್ನು ಮರೆತು ಇಂತಹ ಕೆಳಮಟ್ಟಕ್ಕಿಳಿಯಿತು ಎಂದು ಕೇಳಲು ವಿಷಾದವಾಗುತ್ತದೆ.