
ವಿಜಯ ಕರ್ನಾಟಕದ ಸುದರ್ಶನ ಚನ್ನಂಗಿಹಳ್ಳಿ ಏಕ್ ದಮ್ ಈ ಸಚಿವರಿಗೆ ಬಕೆಟ್ಟು ಹಿಡಿದು ಬಿಟ್ಟಿದ್ದಾರೆ. ಕೆಲ ಅಣಿಮುತ್ತುಗಳ ಸ್ಯಾಂಪಲ್:
- ಈ ಸಚಿವದ್ವಯರು "ಎರಡೂ ಬಣಗಳ ನಡುವೆ ಸೇತುವೆಯಾಗಿ" ಓಡಾಡಿದ್ದಾರೆ.
- ಉಭಯ ಬಣದ ನಾಯಕರ ನಡುವೆ ರಾಜಿಗೆ ಯತ್ನಿಸಿದರು
- ವರಿಷ್ಠರ ಸಂದೇಶಗಳನ್ನು ರವಾನಿಸುವ ಕಾರ್ಯ ನಿರ್ವಹಿಸಿದರು.
ಕಡೆಯದಂತೂ ನಾವೀಗ ಶಿಲಾಯುಗದಲ್ಲಿ ಅಥವಾ ರಾಮಾಯಣದ ಜಮಾನಾದಲ್ಲಿ ಇದ್ದೇವೆಯೆಂಬ ಅಭಿಪ್ರಾಯ ಕೊಡುತ್ತದೆ. ಮೊಬೈಲ್ ಸೆಲ್ ಎಲ್ಲೆಡೆ ಇರುವಾಗ ಈ ಸಚಿವರು "ಸಂದೇಶ ರವಾನಿಸುವ ಕಾರ್ಯ ನಿರ್ವಹಿಸಿದರು" ಎಂದು ಸುದರ್ಶನ ಹೇಳಿ ಓದುಗರ ಕಿವಿ ಮೇಲೆ ಹೂ ಇಡಲು ಯತ್ನಿಸಿದ್ದಾರೆ.
ಯಡ್ಡಿ ರೆಡ್ಡಿ ಹೊಡೆದಾಡಿಕೊಳ್ಳುತ್ತಿರುವಾಗ ಎಲ್ಲೋ ಅಡಗಿ ಕುಳಿತಿದ್ದ ಮತ್ತು ಎಲ್ಲಾ activity ದೆಹಲಿಗೆ shift ಆಗಿದ್ದಾಗ ಬೆಂಗಳೂರಿನಲ್ಲೆ ಇದ್ದ ಕಟ್ಟಾ ಅಶೋಕ್ ರವರು ಈಗ ಎಲ್ಲಾ ಬಿಕ್ಕಟ್ಟು ಪರಿಹಾರವಾದ ನಂತರ ವಿ.ಕ.ದಲ್ಲಿ "ಮುತ್ಸದ್ಧಿ"ಗಳಾಗಿ ಕಂಡುಬರುವುದರ ಹಿಂದೆ ಏನು ಕೆಲಸ ಮಾಡಿರಬಹುದು? 24x7 ಟಿವಿ ಕವರೇಜಿನ ಕಾಲದಲ್ಲಿ ಹೀಗೆಲ್ಲಾ ಬರೆದರೆ ಜನ ನಂಬುತ್ತಾರಾ?